
ವಿಟ್ಲ: ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟಿ ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿಯಾಗಿ ಆಟೋ ಪ್ರಯಾಣಿಕ ಮೃತಪಟ್ಟ ಘಟನೆ ಪೆರುವಾಯಿ-ಬೆರಿಪದವು ಎಂಬಲ್ಲಿ ನಡೆದಿದೆ.
ಪೆರುವೋಡಿ ನಿವಾಸಿ ನಾಗೇಶ್ ಭಟ್(47) ಮೃತ ಆಟೋ ಪ್ರಯಾಣಿಕ. ಸ್ಕೂಟಿ ಮತ್ತು ಆಟೋರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋದಲ್ಲಿ ಪ್ರಯಾಣಿಕ ನಾಗೇಶ್ ರಸ್ತೆಗೆ ಎಸೆಯಲ್ಪಟ್ಟಿದ್ದು, ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಪ್ರಯಾಣಿಕ ನಾಗೇಶ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
