Home ಸುದ್ದಿಗಳು ಅಂಬಾರಿ ಹೊರುತ್ತಿದ್ದ ಆನೆ ಅರ್ಜುನನಿಗೆ ಉಡುಪಿಯಲ್ಲಿ ಶ್ರದ್ಧಾಂಜಲಿ

ಅಂಬಾರಿ ಹೊರುತ್ತಿದ್ದ ಆನೆ ಅರ್ಜುನನಿಗೆ ಉಡುಪಿಯಲ್ಲಿ ಶ್ರದ್ಧಾಂಜಲಿ

0
ಅಂಬಾರಿ ಹೊರುತ್ತಿದ್ದ ಆನೆ ಅರ್ಜುನನಿಗೆ ಉಡುಪಿಯಲ್ಲಿ ಶ್ರದ್ಧಾಂಜಲಿ

ಉಡುಪಿ: ಮೈಸೂರು ದಸರಾದಲ್ಲಿ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ನಗರದ ಮಾರುತಿ ವೀಥಿಕಾದಲ್ಲಿ ಮಂಗಳವಾರ ನಡೆಯಿತು.

ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಶೃದ್ದಾಂಜಲಿ ನಡೆಯಿತು. ಈ ಸಂದರ್ಭ ಅರಣ್ಯ ಅಧಿಕಾರಿಗಳು, ನಾಗರಿಕ ಸಮಿತಿಯ ಕಾರ್ಯಕರ್ತರು, ಪ್ರಾಣಿಪ್ರಿಯರು, ಸಾರ್ವಜನಿಕರು ಪುಷ್ಪನಮನ ಸಲ್ಲಿಸಿದರು.

ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ, ಉಪ ವಲಯ ಅರಣ್ಯಾಧಿಕಾರಿಗಳಾದ ಗುರುರಾಜ್, ಜೀವನದಾಸ್, ಗಸ್ತು ಅರಣ್ಯ ಪಾಲಕರಾದ ಕೇಶವ ಪೂಜಾರಿ, ಚರಣ್ ರಾಜ್, ಮಂಜುನಾಥ್, ಅಭಿಲಾಶ್, ಅರಣ್ಯ ಸಿಬ್ಬಂದಿ ಜೋಯ್ ಹಾಗೂ ಜೋಸ್ ಆಲೂಕಾಸ್ ಆಭರಣ ಮಳಿಗೆಯ ವ್ಯವಸ್ಥಾಪಕ ರಾಜೇಶ್ ಎನ್. ಆರ್, ಪ್ರಾಣಿ ದಯಾ ಸಂಘದ ಮಂಜುಳಾ, ಸಾಮಾಜಿಕ ಕಾರ್ಯಕರ್ತ ತಾರಾನಾಥ ಮೇಸ್ತ ಶಿರೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ವಿಶ್ವಪ್ರಸಿದ್ಧ ಮೈಸೂರು ದಸರೆಯಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಗಜರಾಜ ಅರ್ಜುನ ಆನೆ ಸಕಲೇಶಪುರದ ಯಸಳೂರಿನಲ್ಲಿ ಕಾಡನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಗಾಯಗೊಂಡು, ಚಿಕಿತ್ಸೆಗೆ ಫಲಿಸದೆ ಮೃತಪಟ್ಟಿತ್ತು.

 

LEAVE A REPLY

Please enter your comment!
Please enter your name here