
ಉಡುಪಿ: ಲೋಕಾಯುಕ್ತ ಮುಖ್ಯ ನ್ಯಾಯಾಧೀಶರಾದ ಫಣೀಂದ್ರ ಅವರು ಭಾನುವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ರಥೋತ್ಸವದಲ್ಲಿ ಭಾಗವಹಿಸಿದರು. ಈ ಸಂದರ್ಭ ಪೂಜ್ಯ ಪರ್ಯಾಯ ಶ್ರೀಗಳಿಂದ ಆಶೀರ್ವಾದವನ್ನು ಪಡೆದರು.
ಈ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಮಠದ ಪ್ರಮುಖರಾದ ಪ್ರಸನ್ನ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
