
ಉಡುಪಿ: ಗಬ್ಬರ್ ಸಿಂಗ್ ತುಳು ಫಿಲಂನ ಪ್ರಿಮಿಯೇರ್ ಶೋ ಮಣಿಪಾಲ ಭಾರತ್ ಮಾಲ್ ನಲ್ಲಿ ಫೆ. 28ರಂದು ನಡೆಯಿತು.
ಉಡುಪಿ ಶಾಸಕರಾದ ಯಶಪಾಲ್ ಸುವರ್ಣ ಪ್ರೀಮಿಯರ್ ಶೋ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ತುಳುಕೂಟದ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಉದ್ಯಮಿ ಅಬೂಬಕ್ಕರ್, ವೀಣಾ ಶೆಟ್ಟಿ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಬಿರ್ತಿ ರಾಜೇಶ್ ಶೆಟ್ಟಿ, ಬಿಲ್ಡರ್ ದಿನೇಶ್ ಪೂಜಾರಿ ಸಂತೆಕಟ್ಟೆ, ರಾಘವೇಂದ್ರ ಜೆ.ಬಿ. ಬ್ರಹ್ಮಾವರ, ಶೇಖರ್ ಹಾವಂಜೆ, ಎಸ್. ನಾರಾಯಣ ಬ್ರಹ್ಮಾವರ, ನಾಯಕ ಶರಣ್ ಶೆಟ್ಟಿ, ಹಾಗೂ ಸ್ಥಳೀಯ ಕಲಾವಿದರಾದ ಚಂದ್ರಹಾಸ್ ಶೆಟ್ಟಿ ಕಪ್ಪೆಟ್ಟು, ಪೂರ್ಣಿಮಾ ಶೆಟ್ಟಿ, ಫ್ರಾಂಕಿ ಡಿಸೋಜಾ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಪ್ರಚಾರ ಸಂಯೋಜಕರಾದ ಜಹೀರ್ ಅಹಮ್ಮದ್ ಬೆಳಪು, ಕೀರ್ತಿರಾಜ್ ಅಂಬಲ್ಪಾಡಿ, ನಿರ್ಮಾಪಕರು ಸತೀಶ್ ಪೂಜಾರಿ ಬಾರ್ಕೂರ್, ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ದಯಾನಂದ ಕಿದಿಯೂರ್ ನೆರವೇರಿಸಿದರು.
ಚಿತ್ರಕಥೆಯೇನು..?
ಗಬ್ಬರ್ ಸಿಂಗ್ ಸಿನಿಮಾ ವಿಭಿನ್ನ ರೀತಿಯ ಕಥೆಯನ್ನು ಹೊಂದಿದ್ದು, 1961-62 ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಈ ಒಂದು ಸತ್ಯ ಕಥೆಯನ್ನು ಆಧರಿಸಿ ಸಿನಿಮಾ ರೀತಿಯಲ್ಲಿ ಚಿತ್ರಿಸಿ ನಿರ್ಮಾಣಗೊಂಡಿದೆ. ನವಿರಾದ ಹಾಸ್ಯ ಸಾಹಸ ದೃಶ್ಯಗಳು, ಇಂಪಾದ ಸಂಗೀತ ಹಾಡುಗಳು ಒಳಗೊಂಡಿದ್ದು, ಹಾಗೂ ಸಾಮಾಜಿಕ ಕಳಕಳಿ ಮತ್ತು ರಾಜಕೀಯ ಮೇಲಾಟ ಈ ಚಿತ್ರದ ಪ್ಲಸ್ ಪಾಯಿಂಟ್. ಮುಖ್ಯ ಕಲಾವಿದರಾಗಿ ನವೀನ ಡಿ.ಪಡೀಲ್, ಭೋಜರಾಜ್ ವಾಮಂಜೂರ್ ಅರವಿಂದ್ ಬೋಳಾರ್, ಉಮೇಶ್ ಮಿಜಾರ್ ಸಾಯಿ ಕೃಷ್ಣ ಕುಡ್ಲ, ಪ್ರಸನ್ನ ಶೆಟ್ಟಿ ಬೈಲೂರ್, ಚಂದ್ರಹಾಸ ಮಾಣಿ, ರವಿರಾಮ್ ಕುಂಜ, ಗಿರೀಶ್ ಶೆಟ್ಟಿ ಕಟೀಲ್, ವೀಣಾ ಎಸ್. ಶೆಟ್ಟಿ, ಸಂದೀಪ್ ಭಕ್ತ ಹಾಗೆಯೇ ನಾಯಕನಾಗಿ ಶರಣ್ ಶೆಟ್ಟಿ, ನಾಯಕಿಯಾಗಿ ವೆನಿಸಿತಾ ಡಾಯಸ್, ಸ್ಥಳೀಯ ಉಡುಪಿ ಹಾಗೂ ಮಂಗಳೂರಿನ ಹಲವಾರು ಕಲಾವಿದರು ಕಾಣಿಸಿಕೊಂಡಿದ್ದಾರೆ.
ತುಳು ಸಿನಿಮಾಕ್ಕೆ ಹೊಸ ಮೆರಗು ಕೊಡುವ ರೀತಿಯಲ್ಲಿ ‘ಗಬ್ಬರ್ ಸಿಂಗ್ “ತುಳು ಸಿನಿಮಾ ಮೂಡಿ ಬಂದಿದ್ದು, ಮಸ್ಕತ್, ಕುವೈಟ್, ಬಹರೈನ್, ಕತಾರ್, ದುಬೈ ಯು.ಎಸ್.ಎ., ಸೌತ್ಆಫ್ರಿಕಾ, ಮುಂಬೈ, ಬೆಂಗಳೂರಿನಲ್ಲಿ ಬಿಡುಗಡೆಯಾಗಲಿದೆ.
ಕರಾವಳಿಯಲ್ಲಿ ಏಪ್ರಿಲ್ 12ರಂದು ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರಾದ ಸತೀಶ್ ಪೂಜಾರಿ ಬಾರ್ಕೂರ್ ಈ ಸಂಧರ್ಭದಲ್ಲಿ ತಿಳಿಸಿದರು.
