
ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಅವರು ಬೃಹತ್ ಮೆರವಣಿಗೆ ಮೂಲಕ ತೆರಳಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಬಂಟ್ಸ್ ಹಾಸ್ಟೆಲ್ ಪಕ್ಕದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಕಚೇರಿಯಿಂದ ಪ್ರಾರಂಭವಾದ ಈ ಮೆರವಣಿಗೆಯು ದ.ಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿತು. ಮೆರವಣಿಗೆ ಮೂಲಕ ಆಗಮಿಸಿ ಬ್ರಿಜೇಶ್ ಚೌಟ ಅವರು ನಾಮಪತ್ರವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಸಲ್ಲಿಸಿದರು.
ಇನ್ನು ನಾಮಪತ್ರ ಸಲ್ಲಿಸುವ ಸಂದರ್ಭ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕಿ ಭಾಗೀರಥಿ ಮುರುಳ್ಯ, ಜೆಡಿಎಸ್ ಜಿಲ್ಲಾಧ್ಯಕ್ಷ ಮಾಧವ ಗೌಡ ಇನ್ನಿತರರು ಉಪಸ್ಥಿತರಿದ್ದರು.
