
ಕೋಲಾರ: ಲೋಕಸಭಾ ಚುನಾವಣೆ ಹಿನ್ನೆಲೆ ಏ.6ರಂದು ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಭ್ಯರ್ಥಿ ಪರವಾಗಿ ರೋಡ್ ಶೋ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ‘ನಾವು ಘೋಷಣೆ ಮಾಡಿದ್ದ 5 ಗ್ಯಾರಂಟಿಗಳನ್ನು ಕೂಡ ಅನುಷ್ಠಾನಗೊಳಿಸಿದ್ದೇವೆ. ಜೊತೆಗೆ ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷವೂ ಮುಂದುವರಿಯುತ್ತೆ ಎಂದು ಹೇಳಿದ್ದಾರೆ. ಈ ಹಿಂದೆ ಸ್ವ-ಪಕ್ಷದ ಶಾಸಕರು ಸೇರಿದಂತೆ ಬಿಜೆಪಿ, ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿ ಎಂದು ಹೇಳಿತ್ತು. ಆದರೆ, ನಾವು ಮುಂದಿನ ವರ್ಷಕ್ಕೂ ಗ್ಯಾರಂಟಿ ಯೋಜನೆಗೆ ಹಣ ಮೀಸಲಿಟ್ಟಿದ್ದೇವೆ. ಬಿಜೆಪಿಯವರು ಹೇಳಿದ್ದು ಎಲ್ಲವೂ ಸುಳ್ಳು, ಲೋಕಸಭಾ ಚುನಾವಣೆಯ ನಂತರವೂ ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷವೂ ಮುಂದುವರಿಯುತ್ತದೆ ಎಂದಿದ್ದಾರೆ.
