
ಬೆಂಗಳೂರು : ಹಿರಿಯ ಪತ್ರಕರ್ತರಾದ ದೀಪಕ್ ತಿಮ್ಮಯ್ಯ ಇಂದು ಗೃಹಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಆತ್ಮೀಯವಾಗಿ ಸ್ವಾಗತಿಸಿ ಪಕ್ಷಕ್ಕೆ ಬರ ಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ದೀಪಕ್ ತಿಮ್ಮಯ್ಯ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡೆ. ಒಳ್ಳೆಯ ಸಂದರ್ಭದಲ್ಲಿ ಒಳ್ಳೆ ಸಲಹೆಗಳನ್ನು ನೀಡಿದ್ದಾರೆ ಎಂದು ಹೇಳಿದರು.
