
ಬೆಂಗಳೂರು: ಗೆಳತಿಯನ್ನು ಭೇಟಿ ಮಾಡಲು ಬೆಂಗಳೂರಿಗೆ ಬಂದಿದ್ದ ನಕ್ಸಲ್ನನ್ನು ಕೇಂದ್ರ ಅಪರಾಧ ವಿಭಾಗದ ಎಟಿಸಿ ತಂಡ ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಂಧಿತನನ್ನು ಹರಿಯಾಣ ಮೂಲದ ಅನಿರುದ್ದ್ ಎಂದು ಗುರುತಿಸಲಾಗಿದೆ.
ಅನಿರುದ್ದ್ ರಾಜನ್ ಗೆಳತಿಯನ್ನು ನೋಡಲು 3-4 ದಿನದ ಹಿಂದೆ ಬೆಂಗಳೂರಿಗೆ ಬಂದಿದ್ದನು. ಅನಿರುದ್ದ್ ರಾಜನ್ ಗುರುವಾರ ಬೆಳಗ್ಗೆ 8 ಗಂಟೆಗೆ ಚೆನ್ನೈಗೆ ಹೋಗಲು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದನು. ಈ ವೇಳೆ ಎಟಿಸಿ ತಂಡ ಬಂಧಿಸಿದೆ.
ಅನಿರುದ್ದ್ ನಿಷೇಧಿತ ಸಿಪಿಐ(ಎಂ) ನಕ್ಸಲ್ ಸಂಘಟನೆಯಲ್ಲಿ ಇದ್ದನು. ಅನಿರುದ್ದ್ ನಿಷೇಧಿತ ಬರಹಗಳನ್ನ ಬರೆದು ಪೋಸ್ಟ್ ಮಾಡುತ್ತಿದ್ದನು.
ತನಿಖೆ ವೇಳೆ, ಅನಿರುದ್ದ್ ರಾಜನ್ ಹಣ ಸಂಗ್ರಹ, ಗುಪ್ತ ಸಭೆಗಳನ್ನು ನಡೆಸಿರುವುದು ಪತ್ತೆಯಾಗಿದೆ. ನಕ್ಸಲ್ ಅನಿರುದ್ದ್, ವಿಕಾಸ್ ಘಾಡ್ಗೆ ಎಂಬ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಹೊಂದಿದ್ದಾನೆ.
ಜೊತೆಗೆ ಆರೋಪಿ ಅನಿರುದ್ದ್ ರಾಜನ್ನಿಂದ 2 ಬ್ಯಾಗ್, ಪೆನ್ಡ್ರೈವ್ಗಳು, ಟ್ಯಾಬ್ ವಶಕ್ಕೆ ಪಡೆಯಲಾಗಿದೆ. ಅನಿರುದ್ದ ರಾಜನ್ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
