Home ಸುದ್ದಿಗಳು ಬೆಂಗಳೂರು: ಚಿತ್ರ ನಿರ್ದೇಶಕ ನಾಗಶೇಖರ್ ಕಾರು ಅಪಘಾತ

ಬೆಂಗಳೂರು: ಚಿತ್ರ ನಿರ್ದೇಶಕ ನಾಗಶೇಖರ್ ಕಾರು ಅಪಘಾತ

0
ಬೆಂಗಳೂರು: ಚಿತ್ರ ನಿರ್ದೇಶಕ ನಾಗಶೇಖರ್ ಕಾರು ಅಪಘಾತ

ಬೆಂಗಳೂರು: ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಕನ್ನಡ ಚಿತ್ರ ನಿರ್ದೇಶಕ ನಾಗಶೇಖರ್ ಅವರ ಕಾರು ಅಪಘಾತಕ್ಕೀಡಾಗಿದೆ.

ರಭಸವಾಗಿ ಬಂದ ಕಾರು ಮರಕ್ಕೆ ಗುದ್ದಿತ್ತು. ಇತ್ತ ಫುಟ್‌ಪಾತ್‌ ಮೇಲೆ ನಿಂತಿದ್ದ ಮಹಿಳೆಗೂ ಕಾರು ಡಿಕ್ಕಿ ಹೊಡೆದಿದೆ.

ಫುಟ್‌ಪಾತ್ ಮೇಲೆ ನಿಂತಿದ್ದ ಲಕ್ಷ್ಮಿ ಎಂಬ ಮಹಿಳೆಗೆ ಸಣ್ಣ-ಪುಟ್ಟ ಗಾಯವಾಗಿದೆ.

ಈ ಸಂಬಂಧ ಜ್ಞಾನಭಾರತಿ ಸಂಚಾರಿ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಹೇಳಿಕೆ ನೀಡಿದ್ದು, ಕಾರು ಓಡಿಸಿಕೊಂಡು ಬರುವಾಗ ಕಣ್ಣು ಮಂಜು ಆಗಿ ನಿಯಂತ್ರಣ ಕಳೆದುಕೊಂಡು ಕಾರು ಫುಟ್‌ಪಾತ್‌ ಮೇಲೆ ಹತ್ತಿದೆ ಎಂದು ಹೇಳಿಕೆ ಕೊಟ್ಟಿದ್ದಾರೆ.

ಸ್ವತಃ ನಾಗಶೇಖರ್ ಅವರೇ ಆ ಮಹಿಳೆಯನ್ನು ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

ಸದ್ಯ ಅಪಘಾತದ ಸಂಬಂಧ ಸಂಚಾರಿ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಲ್ಲ. ಸೆಲ್ಪ್ ಆಕ್ಸಿಡೆಂಟ್ ಹಿನ್ನೆಲೆಯಲ್ಲಿ ಇನ್ಸೂರೆನ್ಸ್ ಕ್ಲೈಮ್ ಮಾಡಲು ಒಂದು ಮೆಮೋ ಕಾಪಿ ಕೊಡುವುದಾಗಿ ಪೊಲೀಸರು ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here