
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿಸರ್ಕಸ್ ನಡೆಸುತ್ತಿದ್ದಾರೆ. ಏನೇ ಆದರೂ ದರ್ಶನನ್ನು ಜೈಲಿನಿಂದ ಹೊರತರಬೇಕೆಂದು ಪ್ರಯತ್ನ ಪಡುತಿದ್ದು ಈಗ ಶಕ್ತಿ ದೇವತೆಯ ಮೊರೆ ಹೋಗಿದ್ದಾರೆ.
ಹೌದು! ಅಸ್ಸಾಂನ ಗುವ್ಹಾಟಿಯಲ್ಲಿರುವ 51 ಶಕ್ತಿಪೀಠಗಳಲ್ಲಿ ಒಂದಾಗಿರುವ ಕಾಮಾಕ್ಯ ದೇಗುಲಕ್ಕೆ ದರ್ಶನ್ ಪತ್ನಿ ಭೇಟಿ ನೀಡಿದ್ದಾರೆ.
ಕಾಮಾಕ್ಯ ದೇವಿಯ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಭೇಟಿ ನೀಡಿರುವ ಫೋಟೋ ಶೇರ್ ಮಾಡಿ Prayer is Powerfull ಎಂದು ವಿಜಯಲಕ್ಷ್ಮಿ ಅಡಿಬರಹ ನೀಡಿದ್ದಾರೆ. ಆದರೆ ಎಲ್ಲೂ ದೇವಸ್ಥಾನ ಹೆಸರನ್ನು ಅವರು ಉಲ್ಲೇಖಿಸಿಲ್ಲ.
