
ಹಾಸನ: ಜಿಲ್ಲೆಯ ಬೇಲೂರು ತಾಲ್ಲೂಕಿನ, ಚೀಕನಹಳ್ಳಿ ಗ್ರಾಮದಲ್ಲಿ ಚಾಕುವಿನಿಂದ ಇರಿದು ವಾಟರ್ಮ್ಯಾನ್ ಬರ್ಬರ ಹತ್ಯೆ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ವಾಟರ್ಮ್ಯಾನ್ ಗಣೇಶ (27) ಎಂದು ಗುರುತಿಸಲಾಗಿದೆ. ಮೃತದೇಹವನ್ನು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ನಿನ್ನೆ ಶುಕ್ರವಾರ ರಾತ್ರಿ ಚೀಕನಹಳ್ಳಿ ಗ್ರಾಮದ ಆಟೋ ನಿಲ್ದಾಣದ ಬಳಿ ಗಣೇಶ ನಿಂತಿದ್ದ. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಅದೇ ಗ್ರಾಮದ ರೌಡಿಶೀಟರ್ ಮಧು ಗಣೇಶನ ಜತೆ ಜಗಳ ತೆಗೆದಿದ್ದ. ಜಗಳ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಗಣೇಶನಿಗೆ ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಗಣೇಶ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಲೆ ಬಳಿಕ ಆರೋಪಿ ಎಸ್ಕೇಪ್ ಆಗಿದ್ದಾನೆ.
ಚೀಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗಣೇಶ ವಾಟರ್ಮ್ಯಾನ್ ಆಗಿದ್ದ.
