
ಚಿಕ್ಕಮಗಳೂರು: ಯುವಕರ ತಂಡವೊಂದು ಪ್ಯಾಲೆಸ್ತೇನ್ ಧ್ವಜವನ್ನು ಹಿಡಿದು ಬೈಕ್ನಲ್ಲಿ ರೌಂಡ್ಸ್ ಹಾಕಿದ ಘಟನೆ ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಯಲ್ಲಿ ನಡೆದಿದೆ.ಈ ಘಟನೆಗೆ ಸಂಬಧಿಸಿದ್ದಂತೆ ಆರು ಮಂದಿಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ರೌಂಡ್ಸ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇನ್ಸ್ಪೆಕ್ಟರ್ ಗವಿರಾಜ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ. ಪ್ಯಾಲೆಸ್ತೇನ್ ಧ್ವಜ ಪ್ರಕರಣವನ್ನ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ 198ಅಡಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ಮೇಲೆ ಬಿ.ಎನ್.ಎಸ್. 196 (1), 61(2)b ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಈದ್ ಮಿಲಾದ್ ಬ್ಯಾನರ್ನಲ್ಲಿ ಫ್ರೀ ಪ್ಯಾಲೆಸ್ತೇನ್ ಬರಹ: ಕೊಪ್ಪಳ ಜಿಲ್ಲೆ ಗಂಗಾವತಿಯ ಕಿಲ್ಲಾ ಏರಿಯಾದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ ಹಿನ್ನೆಲೆ ಬ್ಯಾನರ್ ಅಳವಡಿಸಲಾಗಿತ್ತು. ಆ ಬ್ಯಾನರ್ನ ಒಂದು ಭಾಗದಲ್ಲಿ ಫ್ರೀ ಪ್ಯಾಲೆಸ್ತೇನ್ಎಂದು ಬರೆಯಲಾಗಿತ್ತು. ಇದಕ್ಕೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ನಂತರ ಬರಹಕ್ಕೆ ಬಿಳಿ ಬಣ್ಣ ಬಳಿದು ಪ್ಯಾಚ್ ಹಾಕಿದ್ದರು. ಸದ್ಯ ಇದೀಗ ಬ್ಯಾನರ್ ಅನ್ನು ಬದಲಾಯಿಸಿ ಹೊಸ ಬ್ಯಾನರ್ ಅಳವಡಿಸಲಾಗಿದೆ.
