Home ಸುದ್ದಿಗಳು ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಸಾವು: ವೈದ್ಯರು ಎಡವಟ್ಟು ಮಾಡಿದ್ದಾರೆ ಎಂದ ಪೋಷಕರು

ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಸಾವು: ವೈದ್ಯರು ಎಡವಟ್ಟು ಮಾಡಿದ್ದಾರೆ ಎಂದ ಪೋಷಕರು

0
ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಸಾವು: ವೈದ್ಯರು ಎಡವಟ್ಟು ಮಾಡಿದ್ದಾರೆ ಎಂದ  ಪೋಷಕರು

ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32) ಮೃತಪಟ್ಟವರು.

ಎದೆ ಭಾಗ ಉಬ್ಬಿದ ಹಿನ್ನೆಲೆಯಲ್ಲಿ ಗೈನ್ ಇಕೋಮಸ್ಟಿಯಾ ಸರ್ಜರಿಗಾಗಿ ಅವರು ಮಂಗಳೂರು ನಗರದ ಕಂಕನಾಡಿಯ ಬೆಂದೂರ್ ವೆಲ್ ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್​​ಪ್ಲಾಂಟ್ ಕ್ಲಿನಿಕ್​ನಲ್ಲಿ ದಾಖಲಾಗಿದ್ದರು.

ಅರ್ಧ ಗಂಟೆಯಲ್ಲಿ ಮುಗಿಯಬಹುದಾಗಿದ್ದ ಸಣ್ಣ ಶಸ್ತ್ರಚಿಕಿತ್ಸೆ, ಸಂಜೆಯಾದರು ಮುಗಿಯದ ಹಿನ್ನೆಲೆಯಲ್ಲಿ ಅನುಮಾನಗೊಂಡ ಮಾಝಿನ್ ಪೋಷಕರು ವಿಚಾರಿಸಿದಾಗ ಮುಹಮ್ಮದ್ ಮಾಝಿನ್ ಆರೋಗ್ಯದಲ್ಲಿ ಏರುಪೇರು ಆಗಿರುವ ಮಾಹಿತಿ ಬೆಳಕಿಗೆ ಬಂದಿದೆ.

ಕೂಡಲೆ ಪೋಷಕರು ಮುಹಮ್ಮದ್ ಮಾಝಿನ್​ನನ್ನು ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಖಾಸಗಿ ಆಸ್ಪತ್ರೆ ವೈದ್ಯರು ಪರೀಕ್ಷಿಸಿದಾಗ ಮುಹಮ್ಮದ್ ಮಾಝಿನ್ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.

ಸರ್ಜರಿಯ ವೇಳೆ ವೈದ್ಯರು ಎಡವಟ್ಟು ಮಾಡಿದ್ದಾರೆ ಎಂದು ಪೋಷಕರು ಆರೋಪ ಮಾಡಿದ್ದಾರೆ.

ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸರ್ಜರಿ ನಡೆದ ಬೆಂದೂರ್​ ವೆಲ್​ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್​​ಪ್ಲಾಂಟ್ ಕ್ಲಿನಿಕ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

LEAVE A REPLY

Please enter your comment!
Please enter your name here