Home ಸುದ್ದಿಗಳು ಸಚಿವ ಜಮೀರ್ ಅಹ್ಮದ್​ ಗೆ ನ್ಯಾಯಂಗ ನಿಂದನೆ ಸಂಕಷ್ಟ

ಸಚಿವ ಜಮೀರ್ ಅಹ್ಮದ್​ ಗೆ ನ್ಯಾಯಂಗ ನಿಂದನೆ ಸಂಕಷ್ಟ

0
ಸಚಿವ ಜಮೀರ್ ಅಹ್ಮದ್​ ಗೆ ನ್ಯಾಯಂಗ ನಿಂದನೆ ಸಂಕಷ್ಟ

ಬೆಂಗಳೂರು: ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ​ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದಿತ್ತು.

ಹೀಗಾಗಿ ಮುಖ್ಯಮಂತ್ರಿ ವಿರುದ್ಧ ಹೈಕೋರ್ಟ್​ ನೀಡಿರುವ ತೀರ್ಪಿನ ಬಗ್ಗೆ ಸಚಿವ ಜಮೀರ್​ ಅಹ್ಮದ್​ ಖಾನ್​ ಲಘುವಾಗಿ ಮಾತನಾಡಿದ್ದರು. “ಹೈಕೋರ್ಟ್​ ಆದೇಶ ರಾಜಕೀಯ ತೀರ್ಪು” ಎಂದು ಹೇಳಿದ್ದರು.

ಇದೆ ಕಾರಣಕ್ಕೆ ಸಚಿವ ಜಮೀರ್ ಅಹ್ಮದ್ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಹೈಕೋರ್ಟ್​ನಲ್ಲಿ ನ್ಯಾಯಾಂಗ ನಿಂದನೆ  ಅರ್ಜಿ ಸಲ್ಲಿಸಿದ್ದಾರೆ.

ಈ ಮೂಲಕ ಸಚಿವ ಜಮೀರ್ ಅಹ್ಮದ್​ ಅವರಿಗೆ ನ್ಯಾಯಂಗ ನಿಂದನೆ ಸಂಕಷ್ಟ ಎದರಾಗಿದೆ.

ಈ ಬಗ್ಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಹೈಕೋರ್ಟ್​ ತೀರ್ಪು ರಾಜಕೀಯ ಪ್ರೇರಿತ ಎಂಬ ಅರ್ಥದಲ್ಲಿ ನಾನು ಹೇಳಿಲ್ಲ. ಬಾಯಿ ತಪ್ಪಿ ಬಂದಿದೆ. ನ್ಯಾಯಾಲಯದ ಬಗ್ಗೆ ಅಪಾರ ಗೌರವ ಇದೆ. ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

 

LEAVE A REPLY

Please enter your comment!
Please enter your name here