
ನವದೆಹಲಿ: ರಜನೀಕಾಂತ್ ಅಭಿನಯದ ಹೊಸ ಸಿನೆಮಾ ‘ವೆಟ್ಟೆಯಾನ್’ ವಿರುದ್ಧ ಪ್ರಕರಣ ದಾಖಲಾಗಿದೆ.
ಬಿಡುಗಡೆಗೆ ತಯಾರಾಗಿರುವ ರಜನೀಕಾಂತ್ರ ಹೊಸ ಸಿನಿಮಾ ಸಿನಿಮಾದ ಟ್ರೈಲರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಟ್ರೈಲರ್ನಲ್ಲಿ ಕೇಳಿ ಬರುವ ಕೆಲ ಸಂಭಾಷಣೆಗಳ ವಿರುದ್ಧ ವಕೀಲರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಹಾಗೂ ಹೈಕೋರ್ಟ್ನ ಮಧುರೈ ಬೆಂಚ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದಾರೆ.
ರಜನೀಕಾಂತ್ ನಿನ್ನೆಯಷ್ಟೆ ಚೆನ್ನೈನ ಅಪೋಲೊ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಅಭಿಮಾನಿಗಳಿಗೆ ಈ ಸುದ್ದಿ ಖುಷಿ ನೀಡಿದೆ. ಇದರ ಬೆನ್ನಲ್ಲೆ ಸಿನಿಮಾದಲ್ಲಿ ಬಳಸಲಾಗಿರುವ ಕೆಲವು ಸಂಭಾಷಣೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪಲನಿವೇಲುಸ್ವಾಮಿ ಎಂಬುವರು ‘ವೆಟ್ಟೆಯಾನ್’ ಸಿನಿಮಾದಲ್ಲಿ ಬಳಸಲಾಗಿರುವ ಎನ್ಕೌಂಟರ್ ಕುರಿತಾದ ಸಂಭಾಷಣೆಗಳ ಬಗ್ಗೆ ಆಕ್ಷೇಪಣೆ ಎತ್ತಿದ್ದು, ಸಿನಿಮಾದ ಬಿಡುಗಡೆಗೆ ತಾತ್ಕಾಲಿಕ ತಡೆ ನೀಡಬೇಕೆಂದು ಮನವಿ ಮಾಡಿದ್ದರು.
‘ಸಿನಿಮಾದಲ್ಲಿ ಅಕ್ರಮ ಚಟುವಟಿಕೆಯಾದ ಎನ್ಕೌಂಟರ್ಗೆ ಒತ್ತು ನೀಡುವ, ಎನ್ಕೌಂಟರ್ ಅನ್ನು ಸರಿಯೆಂದು ವಾದಿಸುವ ಸಂಭಾಷಣೆಗಳಿವೆ. ಇದು ಸಮಾಜಕ್ಕೆ ಮಾರಕವಾಗಿದ್ದು, ಈ ಸಿನಿಮಾ ಬಿಡುಗಡೆ ಆದರೆ ಜನರ ಮನಸ್ಸಿನಲ್ಲಿ ಎನ್ಕೌಂಟರ್ಗಳು ಸರಿಯೆಂಬ ಭಾವನೆ ಜನರ ಮನಸಿನಲ್ಲಿ ಮೂಡಲಿದೆ.
ಹಾಗಾಗಿ ಈ ಸಿನಿಮಾದಲ್ಲಿರುವ ಎನ್ಕೌಂಟರ್ ಕುರಿತಾದ ಸಂಭಾಷಣೆಗಳನ್ನು ಮ್ಯೂಟ್ ಮಾಡುವಂತೆ ನಿರ್ಮಾಣಸಂಸ್ಥೆಗೆ ಸೂಚಿಸಬೇಕು, ಇಲ್ಲವಾದರೆ ಸಿನಿಮಾದ ಬಿಡುಗಡೆಗೆ ತಾತ್ಕಾಲಿಕ ತಡೆ ನೀಡಬೇಕೆಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಕೋರಲಾಗಿದೆ.
ಅರ್ಜಿಯ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠವು, ಸಿಬಿಎಫ್ಸಿ ಹಾಗೂ ಸಿನಿಮಾ ನಿರ್ಮಾಣ ಮಾಡಿರುವ ಲೈಕಾ ಪ್ರೊಡಕ್ಷನ್ ಹೌಸ್ಗೆ ನೊಟೀಸ್ ಜಾರಿ ಮಾಡಿದೆ. ಆದರೆ ಸಿನಿಮಾದ ಬಿಡುಗಡೆ ಮೇಲೆ ತಾತ್ಕಾಲಿಕ ತಡೆ ನೀಡಲು ಪೀಠವು ನಿರಾಕರಿಸಿದೆ.
