
ಬೆಂಗಳೂರು: ಶಾಸಕ ಬಸನಗೌಡ ಯತ್ನಾಳ್ಗೆ 24ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಏನಿದು ಪ್ರಕರಣ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತನ ವಿಚಾರಣೆ ನಡೆಸಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ದಿನೇಶ್ ಗುಂಡೂರಾವ್ ಬಿಜೆಪಿಯನ್ನು ಟೀಕಿಸಿದ್ದರು.
ಇದಕ್ಕೆ ಪ್ರತಿಯಾಗಿ ಏಪ್ರಿಲ್ 6 ರಂದು ಸುದ್ದಿಗಾರರ ಜತೆ ಮಾತನಾಡಿದ್ದ ಶಾಸಕ ಯತ್ನಾಳ್, ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಹೇಳಿಕೆಯಿಂದಾಗಿ ಯತ್ನಾಳ್ ವಿರುದ್ಧ ದಿನೇಶ್ಗುಂಡೂರಾವ್ ಪತ್ನಿ ತಬಸ್ಸುಮ್ ರಾವ್ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದರು.
ಈ ದೂರನ್ನು ಆಗಸ್ಟ್ 29 ರಂದು ಪುರಸ್ಕರಿಸಿದ್ದ ಕೋರ್ಟ್ ಅ.16 ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಯತ್ನಾಳ್ಗೆ ಸಮನ್ಸ್ ಜಾರಿಗೊಳಿಸಿತ್ತು. ಆದರೆ ಯತ್ನಾಳ್ ಇಂದು ವಿಚಾರಣೆಗೆ ಗೈರಾಗಿದ್ದರು.
ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದೆ.
