Home ಸುದ್ದಿಗಳು ಅವಾಚ್ಯ ಶಬ್ಧಗಳಿಂದ ನಿಂದನೆ: ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ವಿರುದ್ಧ ದೂರು ದಾಖಲು

ಅವಾಚ್ಯ ಶಬ್ಧಗಳಿಂದ ನಿಂದನೆ: ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ವಿರುದ್ಧ ದೂರು ದಾಖಲು

0
ಅವಾಚ್ಯ ಶಬ್ಧಗಳಿಂದ ನಿಂದನೆ: ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ವಿರುದ್ಧ ದೂರು ದಾಖಲು

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ವಿರುದ್ಧ ವಿಜಯಪುರದ ಗಾಂಧಿ ಚೌಕ್ ಠಾಣೆಯಲ್ಲಿ ದೂರು ದಾಖಲಾದ ಘಟನೆ ನಡೆದಿದೆ.

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್​ ಖಾನ್​ ವಿರುದ್ಧ ಅವಾಚ್ಯ ಪದಬಳಸಿ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಮೇಲೆ ದೂರು ದಾಖಲಾಗಿದೆ.

ಪಾಲಿಕೆ ನಾಮ‌ನಿರ್ದೇಶಿತ ಸದಸ್ಯ ಪರಶುರಾಮ ಹೊಸಮನಿ ಎಂಬುವರು ದೂರು ನೀಡಿದ್ದಾರೆ.

ಘಟನೆ ಏನು: ಅಕ್ಟೋಬರ್​ 15 ವಿಜಯಪುರದ ಸಿದ್ದೇಶ್ವರ ಗುಡಿ ಹತ್ತಿರ ನಡೆದ “ವಕ್ಫ್​ ಹಠಾವೋ ದೇಶ ಬಚಾವೋ” ಕಾರ್ಯಕ್ರಮದಲ್ಲಿ ಭಾಷಣ ಮಾಡುವ ಭರದಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ರಾಹುಲ್​ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಮೀರ್​ ಅಹ್ಮದ್​ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಮುಸ್ಲಿಂ ಧರ್ಮಕ್ಕೆ ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಾರ್ವಜನಿಕವಾಗಿ ಇತರೆ ಧರ್ಮದವರನ್ನು ಹಿಯ್ಯಾಳಿಸಿ ಮಾತನಾಡಿ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಎಲ್ಲರಿಗೂ ಮಾನಸಿಕ ನೋವನ್ನುಂಟು ಮಾಡಿದ್ದಾರೆ. ಶಾಂತಿ ಸೌಹಾರ್ದವನ್ನು ಕೆಡಿಸುವ ದುರುದ್ದೇಶದಿಂದ ಈ ರೀತಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ವಿರುದ್ಧ​ ಭಾರತೀಯ ನ್ಯಾಯ ಸಂಹಿತೆ 2023 ರ (U/s-352,353(2)) ಕಲಂ ಅಡಿ ದೂರು ದಾಖಲಿಸಲಾಗಿದೆ.

 

LEAVE A REPLY

Please enter your comment!
Please enter your name here