
ಬಂಟ್ವಾಳ: ಪೂರ್ವದ್ವೇಷದ ಹಿನ್ನೆಲೆಯಲ್ಲಿ ತಂಡವೊಂದು ತಲ್ವಾರ್ ನಿಂದ ದಾಳಿ ಮಾಡಿದ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.
ಈ ಘಟನೆಯಲ್ಲಿ ಇಬ್ಬರು ಯುವಕರು ಗಂಭೀರ ಗಾಯಗೊಂಡಿದ್ದು, ಅವರನ್ನು ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಸಧ್ಯ ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಪಿಗಳನ್ನು ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ ಯಾನೆ ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂದು ಗುರುತಿಸಲಾಗಿದೆ.
ಅಮ್ಮೆಮಾರ್ ನಿವಾಸಿ ತಸ್ಲೀಮ್, ಮಹಮ್ಮದ್ ಶಾಕೀರ್, ನಾಸೀರ್, ಸಿಯಾಬು, ಸೈಫುದ್ದೀನ್ ಅವರು ಮಾತನಾಡುತ್ತಿದ್ದ ವೇಳೆ ತಸ್ಲೀಮ್ ಗೆ ಕರೆಯೊಂದು ಬಂದಿದ್ದು, ಈ ವೇಳೆ ಆರೋಪಿಯು ಅವಾಚ್ಯ ಶಬ್ದಗಳಿಂದ ಬೈದು ನಾಲ್ಕು ಮಾರ್ಗಕ್ಕೆ ಬರುವಂತೆ ಸವಾಲು ಹಾಕಿದ್ದಾನೆ.
ಈ ವೇಳೆ ಅವರು ಅಮ್ಮೆಮಾರ್ ಶಾಲಾ ಬಳಿಗೆ ಹೋದಾಗ, ಆರೋಪಿ ಮನ್ಸೂರ್ ಹಾಗೂ ಇತರರಿದ್ದು, ಈ ವೇಳೆ ಪಲ್ಟಿ ಇಮ್ರಾನ್ ತಲವಾರಿನಿಂದ ತಸ್ಲೀಮ್ ನ ಕಾಲು, ಮತ್ತೋರ್ವ ಆರೋಪಿ ಮುಸ್ತಾಕನು ಬಲಗೈಕಡಿದಿದ್ದು, ಸರ್ಫುದ್ದೀನ್ ಕಲ್ಲಿನಿಂದ ಹೊಡೆದಿದ್ದಾನೆ.
ಘಟನೆಯ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
