
ಅರಂತೋಡು: ಕಾನೂನು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಲೆಟ್ಟಿ ಗ್ರಾಮದ ಕಲ್ಲೆಂಬಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕಲ್ಲೆಂಬಿ ಸಾನದ ಮನೆಯ ರಾಘವ ಬೆಳ್ಳಪ್ಪಾಡ ಅವರ ಪುತ್ರ ಮಿಥುನ್ ರಾಜ್ (26) ಎಂದು ಗುರುತಿಸಲಾಗಿದೆ.
ಮನೆಯವರು ಸುಳ್ಯಕ್ಕೆ ಮದುವೆಗೆಂದು ಹೋಗಿದ್ದರು. ಈ ಸಂದರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಯುವಕ ಸುಳ್ಯದ ಖಾಸಗಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಯಾಗಿದ್ದು, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
