
ಮಂಗಳೂರು: ಬಹು ನಿರೀಕ್ಷಿತ ಪಿಲಿಕುಳ “ನೇತ್ರಾವತಿ- ಫಲ್ಗುಣಿ’ ಜೋಡುಕರೆ ಕಂಬಳ ಮುಂದೂಡಿಕೆಯಾಗುವ ಬಹುತೇಕ ಸಾಧ್ಯತೆ ಎದ್ದು ಕಾಣುತ್ತಿದೆ.
ಮೂಡುಶೆಡ್ಡೆ ಪಂಚಾಯತ್ ಚುನಾವಣೆ ಕಾರಣಕ್ಕೆ ಈ ಕಂಬಳ ಮುಂದೂಡಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಜಿಲ್ಲಾಡಳಿತ ವತಿಯಿಂದ ಆಯೋಜಿಸಲು ಉದ್ದೇಶಿಸಲಾಗಿರುವ ಈ ಕಂಬಳ ಹತ್ತು ವರ್ಷಗಳ ಬಳಿಕ ಇದೀಗ ನ.17 ಮತ್ತು 18ರಂದು ಪಿಲಿಕುಳದ ಜೋಡುಕರೆಯಲ್ಲಿ ಕಂಬಳ ಆಯೋಜಿಸಲು ಸಿದ್ಧತೆ ನಡೆಸಲಾಗಿತ್ತು.
ನ.23ರಂದು ಚುನಾವಣೆ ನಡೆಯಲಿದ್ದು, ಇದರಿಂದಾಗಿ ಕಂಬಳ ಆಯೋಜಿಸಿದರೆ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ.
ಆದ್ದರಿಂದ ಈ ಬಗ್ಗೆ ನ.11ರಂದು ಜಿಲ್ಲಾಡಳಿತ, ಕಂಬಳ ಸಮಿತಿಯವರ ಸಭೆ ನಡೆಯಲಿದ್ದು, ಇದರಲ್ಲಿ ತೀರ್ಮಾನವಾಗುವ ಸಾಧ್ಯತೆಯಿದೆ. ಒಂದು ವೇಳೆ ಕಂಬಳ ಮುಂದೂಡಿಕೆಯಾದರೆ ನ.17ರಂದು ಪೂರ್ವಭಾವಿ ಕುದಿ ಕಂಬಳ ಆಯೋಜಿಸುವ ಬಗ್ಗೆಯೂ ಚಿಂತನೆ ನಡೆದಿದೆ.
