
ಉಡುಪಿ: ನಕ್ಸಲ್ ವಿಕ್ರಂ ಗೌಡ ಎನ್ಕೌಂಟರ್ ನಡೆದ ಪೀತಬೈಲು ಸ್ಥಳಕ್ಕೆ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ಅವರು ಭೇಟಿ ನೀಡಿದ್ದಾರೆ.
ಡಿಜಿಪಿ ಭೇಟಿ ಬೆನ್ನಲ್ಲೇ ಕೂಂಬಿಂಗ್ ಚುರುಕುಗೊಂಡಿದೆ. ಪೀತಬೈಲ್, ಕಬ್ಬಿನಾಲೆ ಬಚ್ಚಪ್ಪು ಪರಿಸರದಲ್ಲಿ ಓಡಾಟ ನಡೆಸಿ ಎಎನ್ಎಫ್ ಕ್ಯಾಂಪ್ಗೆ ಭೇಟಿಕೊಟ್ಟು ಸೂಚನೆ ನೀಡಿದ್ದಾರೆ.
ಶರಣಾಗತಿಯೊಂದೇ ನಿಮಗಿರುವ ಒಂದು ದಾರಿ. ಶರಣಾಗದಿದ್ದರೆ ಕಾರ್ಯಾಚರಣೆ ಹೊರತು ನಮಗೆ ಬೇರೆ ದಾರಿಯಿಲ್ಲ ಎಂದು ಕಾಡಿನಲ್ಲಿ ಅವಿತಿರುವ ನಕ್ಸಲರಿಗೆ ಎಚ್ಚರಿಕೆ ನೀಡಿದ್ದಾರೆ.
ಕಬ್ಬಿನಾಲೆ ಅರಣ್ಯ ಪ್ರದೇಶ ವ್ಯಾಪ್ತಿಯ ಪೀತಬೈಲು ಘಟನಾ ಸ್ಥಳದಲ್ಲಿ ದಾಖಲೆ ಸಂಗ್ರಹ ಮಾಡುವ ಸಲುವಾಗಿ ಎಎನ್ಎಫ್ ಬೆಂಗಳೂರಿನಿಂದ ತಜ್ಞ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್ಎಸ್ಎಲ್) ಅಧಿಕಾರಿಗಳನ್ನು ಕರೆಸಿಕೊಂಡಿದೆ.
