
ಮಂಗಳೂರು: ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಗುರುವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಮನೆಗೆ ಹಾಗೂ ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಕಳೆದ ಎರಡು ತಿಂಗಳ ಹಿಂದೆಯಷ್ಟೇ ಮಂಗಳೂರಿಗೆ ವರ್ಗಾವಣೆಯಾಗಿ ಬಂದಿದ್ದ ಕೃಷ್ಣವೇಣಿ ಅವರು ವೇಲೆನ್ಸಿಯಾದಲ್ಲಿರುವ ಫ್ರೆಡ್ ರೋಸ್ ಎನ್ಕಲೇವ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದರು.
ಲೋಕಾಯುಕ್ತ ಎಸ್ ಪಿ ನಟರಾಜ್ ನೇತೃತ್ವದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
