
ಉಳ್ಳಾಲ: ಕೊಣಾಜೆ ಕಲ್ಕಾರ್ ಎಂಬಲ್ಲಿ ರಿಕ್ಷಾವೊಂದು ಬ್ರೇಕ್ ಫೇಲ್ ಆಗಿ ಮರವೊಂದಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಈ ಘಟನೆಯಲ್ಲಿ ರಿಕ್ಷಾ ಅಪಘಾತದಲ್ಲಿ ಚಾಲಕ ಮೃತಪಟ್ಟಿದ್ದು, ಮೃತರನ್ನು ಕುಂಬಳೆ ಮಂಜಂತ್ತಡ್ಕ ನಿವಾಸಿ ನಾರಾಯಣ ಗಟ್ಟಿ (50) ಎಂದು ಗುರುತಿಸಲಾಗಿದೆ.
ರಿಕ್ಷಾದೊಳಗಿದ್ದ ಮಹಿಳೆ, ಅವರ ಪುತ್ರ ಹಾಗೂ ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕುಂಬಳೆಯಿಂದ ಕೊಲ್ಯ ಅಡ್ಕ ಸಮೀಪ ನಡೆದಿದ್ದ ಸಂಬಂಧಿಕರ ಹುಟ್ಟುಹಬ್ಬ ಸಮಾರಂಭಕ್ಕೆ ಖಾಸಗಿ ರಿಕ್ಷಾದಲ್ಲಿ ಆಗಮಿಸಿದ್ದ ಅವರು ಅಲ್ಲಿಂದ ಸಂಬಂಧಿಕರನ್ನು ಕೊಣಾಜೆ ಕಲ್ಕಾರ್ ಎಂಬಲ್ಲಿಗೆ ಬಿಟ್ಟು ಬರಲು ರಿಕ್ಷಾದಲ್ಲೇ ತೆರಳಿದ್ದರು. ಕಲ್ಕಾರ್ ಇಳಿಜಾರು ಪ್ರದೇಶದಲ್ಲಿ ರಿಕ್ಷಾ ಇಳಿಯುತ್ತಿದ್ದಂತೆ ಬ್ರೇಕ್ ವೈಫಲ್ಯಕ್ಕೀಡಾಗಿ ಮರವೊಂದಕ್ಕೆ ರಿಕ್ಷಾ ಢಿಕ್ಕಿ ಹೊಡೆದಿದೆ.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
