Home ಸುದ್ದಿಗಳು ಅಕ್ರಮ ಮರಳುಗಾರಿಕೆಗೆ ಸಹಾಯ ಮಾಡಿರುವ ಆರೋಪ: ಪಿಎಸ್‌ಐ ಅಮಾನತು

ಅಕ್ರಮ ಮರಳುಗಾರಿಕೆಗೆ ಸಹಾಯ ಮಾಡಿರುವ ಆರೋಪ: ಪಿಎಸ್‌ಐ ಅಮಾನತು

0
ಅಕ್ರಮ ಮರಳುಗಾರಿಕೆಗೆ ಸಹಾಯ ಮಾಡಿರುವ ಆರೋಪ: ಪಿಎಸ್‌ಐ ಅಮಾನತು

ಉಡುಪಿ: ಅಕ್ರಮ ಮರಳುಗಾರಿಕೆಗೆ ಸಹಾಯ ಮಾಡಿರುವ ಆರೋಪದಲ್ಲಿ ಪೊಲೀಸ್‌ ಠಾಣೆಯ ಉಪ ನಿರೀಕ್ಷಕರೊಬ್ಬರನ್ನು ಅಮಾನತು ಮಾಡಿದ ಘಟನೆ ನಡೆದಿದೆ.

ಕಾಪು ಪೊಲೀಸ್‌ ಠಾಣೆಯ ಉಪ ನಿರೀಕ್ಷಕ ಅಬ್ದುಲ್‌ ಖಾದರ್‌ ಅವರನ್ನು ಅಮಾನತು ಮಾಡಲಾಗಿದೆ.

ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮರಳು ದಂಧೆಕೋರರೊಂದಿಗೆ ಪಿಎಸ್‌ಐ ಅಬ್ದುಲ್‌ ಖಾದರ್‌ ಸಹಕರಿಸಿದ್ದಾರೆ ಎನ್ನುವುದನ್ನು ತಿಳಿಸುವ ಆಡಿಯೋವೊಂದರ ಬಗ್ಗೆ ಮೇಲಧಿಕಾರಿಗಳಿಗೆ ದೂರು ನೀಡಲಾಗಿತ್ತು.

ಪ್ರಾಥಮಿಕ ತನಿಖೆ ನಡೆಸಿದ ವೇಳೆ ಕಾಪು ಠಾಣಾಧಿಕಾರಿ ವಿರುದ್ಧದ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಪಿಎಸ್‌ಐ ಅವರನ್ನು ಅಮಾನತುಗೊಳಿಸಲಾಗಿದೆ.

 

LEAVE A REPLY

Please enter your comment!
Please enter your name here