Home ಸುದ್ದಿಗಳು ಯತ್ನಾಳ್ ವಿಷಯ ಸುಸೂತ್ರವಾಗಿ ಬಗೆಹರಿಯುತ್ತದೆ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ

ಯತ್ನಾಳ್ ವಿಷಯ ಸುಸೂತ್ರವಾಗಿ ಬಗೆಹರಿಯುತ್ತದೆ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ

0
ಯತ್ನಾಳ್ ವಿಷಯ ಸುಸೂತ್ರವಾಗಿ ಬಗೆಹರಿಯುತ್ತದೆ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ

ಶಿವಮೊಗ್ಗ: ಪರಸ್ಪರ ಕಚ್ಚಾಡುವುದರಿಂದ ಲಾಭವಿಲ್ಲ. ಯತ್ನಾಳ್ ವಿಷಯ ಸುಸೂತ್ರವಾಗಿ ಬಗೆಹರಿಯುತ್ತದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಒಟ್ಟಾಗಿ ಹೋಗುವುದರಿಂದ ಸಾಧನೆ ಮಾಡಲು ಸಾಧ್ಯವಿದೆ. ಎಲ್ಲರೂ ಕುಳಿತುಕೊಂಡು ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ.

ಎಲ್ಲರೂ ಒಟ್ಟಾಗಿ ಈ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮಾಡಬೇಕು. ಇನ್ನೂ ಕಾಂಗ್ರೆಸ್ ಸಮಾವೇಶ, ಅದು ಆ ಪಕ್ಷದ ಸಮಾವೇಶ. ಅದನ್ನು ಅವರು ಮಾಡಿಕೊಳ್ಳಲಿ ಎಂದರು.

ಸಿಎಂ ವಿರುದ್ಧ ಇಡಿ ತನಿಖೆ ವಿಚಾರವಾಗಿ, ಇಡಿಗೆ ಪೂರ್ತಿ ಅಧಿಕಾರ ಇದೆ. ಇಡಿ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಅದೇ ಅಂತಿಮ. ಸಿಎಂ ವಿರುದ್ಧ ಸಾಕ್ಷ್ಯಾಧಾರಗಳು ಸಿಕ್ಕಿವೆ. ಮುಖ್ಯಮಂತ್ರಿಯಾಗಿ ಇಡಿಯವರಿಗೆ ಗೌರವ ಕೊಡೋದು ಕಲಿಯಬೇಕು. ಇದು ಮುಖ್ಯಮಂತ್ರಿ ಅವರಿಗೆ ಶೋಭೆತರುವುದಿಲ್ಲ ಎಂದರು.

 

LEAVE A REPLY

Please enter your comment!
Please enter your name here