
ಬೆಂಗಳೂರು: ಡೀಸೆಲ್ ದರ ಏರಿಕೆ, ಶಕ್ತಿ ಯೋಜನೆಯಿಂದಾಗಿ ನಷ್ಟಕ್ಕೆ ಸಿಲುಕಿರುವ ಸರ್ಕಾರ ಈಗ ಅನಿವಾರ್ಯವಾಗಿ ಬಸ್ ಟಿಕೆಟ್ ದರವನ್ನು ಏರಿಕೆ ಮಾಡಿದೆ.
ಕ್ಯಾಬಿನೆಟ್ ಸಭೆಯ ಬಳಿಕ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದರ ಏರಿಕೆಯ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.
ಬಿಎಂಟಿಸಿ ಬಸ್ ದರ ಏರಿಕೆಯಾಗಿ 10 ವರ್ಷ ಆಗಿದ್ದರೆ ಕೆಎಸ್ಆರ್ಟಿಸಿ ದರ ಏರಿಕೆಯಾಗಿ 5 ವರ್ಷವಾಗಿದೆ. 2020 ಫೆಬ್ರವರಿ 26ರಂದು ಕೆಎಸ್ ಆರ್ ಟಿಸಿ ,ಕೆಕೆಆರ್ ಟಿಸಿ ಹಾಗೂ ಎನ್ ಡಬ್ಲೂ ಕೆಎಸ್ ಆರ್ ಟಿ 12% ಏರಿಕೆಯಾಗಿತ್ತು.
ಟಿಕೆಟ್ ದರ ಏರಿಕೆ ಅನಿವಾರ್ಯವಾಗಿ ಮಾಡಲೇಬೇಕಿತ್ತು. 15% ಟಿಕೆಟ್ ದರ ಏರಿಕೆ ಮಾಡಿದ್ದೇವೆ. ಬಿಜೆಪಿ ಅವರು ಸಾವಿರಾರು ಕೋಟಿ ಸಾಲ ಉಳಿಸಿ ಹೋಗಿದ್ದರು. ಸಾರಿಗೆ ಸಂಸ್ಥೆಗಳು ಉಳಿಬೇಕು ಹೀಗಾಗಿ ಟಿಕೆಟ್ ದರ ಏರಿಕೆ ಮಾಡಿದ್ದೇವೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಬಿಎಂಟಿಸಿಯಿಂದ 42%, ಎನ್ಡಬ್ಲ್ಯೂ ಕೆಎಸ್ಆರ್ಟಿಸಿಯಿಂದ 25%, ಕೆಎಸ್ಆರ್ಟಿಸಿ ಮತ್ತು ಕೆಕೆಆರ್ಟಿಸಿಯಿಂದ 28% ದರ ಏರಿಕೆಗೆ ಪ್ರಸ್ತಾವನೆ ಬಂದಿತ್ತು ಎಂದು ಹೇಳಿದ್ದಾರೆ.
