
ವಿಟ್ಲ: ಶ್ರೀಪಂಚಲಿಂಗೇಶ್ವರ ದೇವಸ್ಥಾನದ ರಥೋತ್ಸವದ ವೇಳೆ ಡ್ರೋನ್ ನಿಯಂತ್ರಣ ತಪ್ಪಿ ದೇವರ ಪ್ರಭಾವಳಿಗೆ ಬಡಿದ ಘಟನೆ ನಡೆದಿದೆ.
ರಥದಲ್ಲಿ ಏರುವ ಹೊತ್ತಿಗೆ ದೇವರ ಉತ್ಸವ ಮೂರ್ತಿಗೆ ಡ್ರೋನ್ ಬಡಿದಿದೆ. ಬಳಿಕ ರಥದ ಮೇಲಿದ್ದ ಸಹಾಯಕ ಅರ್ಚಕರ ತಲೆಗೆ ಬಡಿದು ಬಿದ್ದಿದೆ.
ಈ ಘಟನೆಯಿಂದ ದೇವರ ಮೂರ್ತಿ ಹೊತ್ತಿದ್ದ ಅರ್ಚಕರು ತಬ್ಬಿಬ್ಬಾಗಿದ್ದು, ಅವರು ಕೊಂಚ ನಿಯಂತ್ರಣ ತಪ್ಪಿದ್ದರೂ ಉತ್ಸವ ಮೂರ್ತಿ ಸಹಿತ ಅವರೂ ಕೆಳಕ್ಕೆ ಬೀಳುತ್ತಿದ್ದರು. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ.
ತಕ್ಷಣ ಸಹ ಅರ್ಚಕರು ಡ್ರೋನ್ ಅನ್ನು ಒದ್ದು ಎಸೆದಿದ್ದಾರೆ.
