
ಬೆಂಗಳೂರು: ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ ಎಂದು ಪತ್ರ ಬರೆದು ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಾಪತ್ತೆಯಾದ ವಿದ್ಯಾರ್ಥಿಯನ್ನು ಮೋಹಿತ್ ಋಷಿ ಎಂದು ಗುರುತಿಸಲಾಗಿದೆ. ಈತ ವಿದ್ಯಾರಣ್ಯಪುರದ ನಿವಾಸಿ ಅರ್ಜುನ್ ಕುಮಾರ್ ಎಂಬುವವರ ಪುತ್ರ ಮೋಹಿತ್ ಋಷಿ ಬಿಇಎಲ್ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ.
ಅಧರ್ಮದ ಜಗತ್ತನ್ನ ತೊರೆದು ಸತ್ಯದ ಕಡೆ ಹೋಗುತ್ತಿದ್ದೇನೆ, ಅಸತ್ಯದ ಪ್ರಪಂಚದಲ್ಲಿ ಸತ್ಯ ಹುಡುಕಲು ಹೋಗುತ್ತಿದ್ದೇನೆ ಎಂದು ಪುಸ್ತಕದಲ್ಲಿ ಬರೆದು ಜನವರಿ 16ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮನೆಯಲ್ಲೇ ಮೊಬೈಲ್ ಬಿಟ್ಟು ಹೋಗಿದ್ದಾನೆ.
ವಿದ್ಯಾರ್ಥಿಯ ಪೋಷಕರು ಸೋಷಿಯಲ್ ಮೀಡಿಯಾದಲ್ಲಿಯೂ ಫೋಟೋ ಹಾಕಿ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಯ ಪೋಷಕರು ದೂರು ನೀಡಿದ್ದಾರೆ.
ಸದ್ಯ ಉತ್ತರ ಪ್ರದೇಶದ ಪ್ರಯಾಜ್ ರಾಜ್ನಲ್ಲಿ ಕುಂಭಮೇಳ ನಡೆಯುತ್ತಿರುವುದರಿಂದ ಮೋಹಿತ್ ಪ್ರಯಾಗ್ ರಾಜ್ಗೆ ಹೋಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸಿಸಿಟಿವಿ ಪರಿಶೀಲನೆ ಮಾಡಿ ಹುಡುಕಾಡುತ್ತಿದ್ದಾರೆ.
