Home ಸುದ್ದಿಗಳು ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಬಾಲಿಶ: ವಿಶ್ವಪ್ರಸನ್ನ ಶ್ರೀ

ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಬಾಲಿಶ: ವಿಶ್ವಪ್ರಸನ್ನ ಶ್ರೀ

0
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಬಾಲಿಶ: ವಿಶ್ವಪ್ರಸನ್ನ ಶ್ರೀ

ಉಡುಪಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಂಭಮೇಳದ ಬಗ್ಗೆ ಅವಹೇಳನ ಮಾಡಿರುವ ವಿಚಾರಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.

ಮಹಾಕುಂಭಮೇಳದಲ್ಲಿ ಮಿಂದ ಎಲ್ಲ ಮಂದಿ ಮೂರ್ಖರಾ?.ಅವರದ್ದು ಬಾಲಿಶ ಹೇಳಿಕೆ. ಈ ಹೇಳಿಕೆಯಿಂದ ಅವರ ಆಶಯ ತೆರೆದಿಟ್ಟಿದೆ. ಇಂತಹ ಹೇಳಿಕೆ ಅವರ ಘನತೆಗೆ ತಕ್ಕದಾದ್ದಲ್ಲ. ಕುಂಭಮೇಳಕ್ಕೆ ಬಂದ ಎಲ್ಲರನ್ನ ಖರ್ಗೆ ಅವರು ಮೂರ್ಖರೆಂದು ಹೇಳಿದ ಹಾಗೆ ಆಯ್ತು ಎಂದು ತಿರುಗೇಟು ನೀಡಿದರು.

ಯಾರೂ ಕೂಡಾ ಬಹುಮತವನ್ನು ಕಡೆಗಣಿಸಬೇಡಿ. ಬಹುಮತದ ಎಲ್ಲರ ಭಾವನೆಯನ್ನು ನಾವು ಗೌರವಿಸಬೇಕು. ಏಕ ಮನಸ್ಸಿನಿಂದ ಒಮ್ಮನಸಿನಿಂದ ಎಲ್ಲರೂ ವರ್ತನೆ ಮಾಡಬೇಕು ಎಂದರು.

ಎಲ್ಲರ ಭಾವನೆ ಗೌರವಿಸಬೇಕು ಯಾರನ್ನು ನೋಯಿಸಬಾರದು. ದೇಶ ವಿದೇಶದಿಂದ ಜನ ಬರ್ತಾಯಿದ್ದಾರೆ. ರಾಜಕೀಯ ಪಕ್ಷಗಳು ಎಲ್ಲರೂ ಮತಭೇದ ಮರೆತು ಯಶಸ್ಸಿಗೆ ಕೈಜೋಡಿಸಬೇಕು ಎಂದರು.

 

LEAVE A REPLY

Please enter your comment!
Please enter your name here