
ಉಡುಪಿ: ಫೆ. 15 ರಂದು ಉಡುಪಿ ಅಂಬಾಗಿಲಿನ ಅಮೃತ್ ಗಾರ್ಡನ್ ನಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕ ಸಂಘದ ಉಡುಪಿ ಜಿಲ್ಲಾ, ತಾಲೂಕು ಪದಾಧಿಕಾರಿಗಳ ಹಾಗೂ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಜಿಲ್ಲಾಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ನೈರುತ್ಯ ಶಿಕ್ಷಕರ ಕ್ಷೇತ್ರದ ಶಾಸಕ ಎಸ್ ಎಲ್ ಭೋಜೇಗೌಡ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಸಹಶಿಕ್ಷಕರ ಸಂಘ ರಾಜ್ಯಧ್ಯಕ್ಷ ಸಿದ್ದ ಬಸಪ್ಪ, ಮಣಿಪಾಲ ಎಚ್ ಪಿ ಆರ್ ಸಮೂಹ ಸಂಸ್ಥೆಗಳ ಆದ್ಯಕ್ಷ ಲ| ಹರಿಪ್ರಸಾದ್ ರೈ, ಉಪನಿರ್ದೇಶಕ ಗಣಪತಿ ಕೆ. ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಡಾ| ಎಲ್ಲಮ್ಮ ಮತ್ತಿತರರು ಭಾಗವಹಿಸಲಿದ್ದಾರೆ.
