Home ಕರ್ನಾಟಕ ಕರಾವಳಿ ಫೆ. 22 ರಿಂದ 26ರವರೆಗೆ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ‘ಶಿವಪಾಡಿ ವೈಭವ’: ಕೃಷಿ, ಆರೋಗ್ಯ, ಆಹಾರ ಮೇಳಗಳ ಸಮಾಗಮ

ಫೆ. 22 ರಿಂದ 26ರವರೆಗೆ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ‘ಶಿವಪಾಡಿ ವೈಭವ’: ಕೃಷಿ, ಆರೋಗ್ಯ, ಆಹಾರ ಮೇಳಗಳ ಸಮಾಗಮ

0
ಫೆ. 22 ರಿಂದ 26ರವರೆಗೆ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ‘ಶಿವಪಾಡಿ ವೈಭವ’: ಕೃಷಿ, ಆರೋಗ್ಯ, ಆಹಾರ ಮೇಳಗಳ ಸಮಾಗಮ

ಮಣಿಪಾಲ: ಇಲ್ಲಿನ ಶಿವಪಾಡಿ ದೇವಳದ ಅಭಿವೃದ್ಧಿ ಟ್ರಸ್ಟ್​ ಹಾಗೂ ಶಿವಪಾಡಿ ವೈಭವ ಆಚರಣಾ ಸಮಿತಿಯ ವತಿಯಿಂದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಶಿವರಾತ್ರಿಯ ಅಂಗವಾಗಿ ಫೆ. 22 ರಿಂದ 26ರವರೆಗೆ ಐದು ದಿನಗಳ ಕಾಲ ‘ಶಿವಪಾಡಿ ವೈಭವ’ ಕಾರ್ಯಕ್ರಮ ನಡೆಯಲಿದ್ದು, ಯಕ್ಷಗಾನ, ಕೃಷಿ, ಆರೋಗ್ಯ, ಆಹಾರ ಮೇಳಗಳು ನಡೆಯಲಿವೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ರಘುಪತಿ ಭಟ್​ ಮಾತನಾಡಿ, ಕಾರ್ಯಮ್ರವನ್ನು ಫೆ. 22ರಂದು ಸಾಯಂಕಾಲ 4 ಗಂಟೆಗೆ ಧರ್ಮಸ್ಥಳದ ಧಮಾರ್ಧಿಕಾರಿ ಡಿ. ವಿರೇಂದ್ರ ಹೆಗ್ಗಡೆ ಇವರು ಉದ್ಘಾಟಿಸಲಿದ್ದಾರೆ. ಮಾಹೆ ಸಹಕುಲಾಧಿಪತಿ ಡಾ. ಎಚ್​.ಎಸ್​ ಬಲ್ಲಾಳ್​ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಕೃಷಿ ಮೇಳ : 22ರಿಂದ 26ರವರೆಗೆ ಪ್ರತಿದಿನ ನಡೆಯುವ ಕೃಷಿ ಮೇಳದಲ್ಲಿ ಕೃಷಿ ಗೋಷ್ಠಿ, ವಸ್ತು ಪ್ರದರ್ಶನ ಹಾಗೂ 250ಕ್ಕೂ ಹೆಚ್ಚು ಕೃಷಿ ಮಳಿಗೆಗಳನ್ನು ತೆರೆಯಲಾಗುವುದು. ಮೇಳದಲ್ಲಿ 50 ಮಂದಿ ಕೃಷಿ ಸಾಧಕರನ್ನು ಸನ್ಮಾನಿಸಲಾಗುವುದು.

ಆಹಾರ ಮೇಳ : ಆಹಾರ ಮೇಳದಲ್ಲಿ 250ಕ್ಕೂ ಅಧಿಕ ಶುದ್ಧ ದೇಸಿ ಶಾಖಾಹಾರಿ ಖಾದ್ಯ, ತಿಂಡಿ- ತಿನಿಸುಗಳ ಮಳಿಗೆಗಳು ಇರಲಿವೆ.

ಮನೋರಂಜನಾ ಮೇಳ: ಮಕ್ಕಳು ಹಾಗೂ ಹಿರಿಯರಿಗಾಗಿ ಮನೋರಂಜನಾ ಮೇಳವೂ ಇರಲಿದ್ದು ಅಮ್ಯೂಸ್​ಮೆಂಟ್​ ಪಾರ್ಕ್​ ಗಮನ ಸೆಳೆಯಲಿದೆ.

ಆರೋಗ್ಯ ಮೇಳ: ಪ್ರತಿದಿನವೂ ಹೆಸರಾಂತ ಆಸ್ಪತ್ರೆಗಳು ಹಾಗೂ ಆರೋಗ್ಯ ಕಲ್ಯಾಣ ಇಲಾಖೆ ವತಿಯಿಂದ ಆರೋಗ್ಯ ಮೇಳ ನಡೆಯಲಿದ್ದು, ನೇತ್ರ ಉಚಿತ ತಪಾಸಣೆ, ಕನ್ನಡಕ ವಿತರಣೆ, ಉಚಿತ ಯೋಗ ತರಬೇತಿ ಇರಲಿದೆ.

ಯಕ್ಷ ಮೇಳ: ಕರಾವಳಿಯ ಗಂಡು ಕಲೆಯಾದ ಯಕ್ಷಗಾನ ಪ್ರದರ್ಶನ ಇರಲಿದೆ. ಪ್ರತಿರಾತ್ರಿ ವಿವಿಧ ಮೇಳಗಳಿಂದ ಬಯಲಾಟ ನಡೆಯಲಿದೆ.

ಧಾರ್ಮಿಕ ಕಾರ್ಯಕ್ರಮ: ದೇವಳದಲ್ಲಿ ಧಾರ್ಮಿಕ ವೈಭವವೂ ಇರಲಿದ್ದು ನಾರೀಕೇಳ ಗಣಯಾಗ, ಮೂಡುಗಣಪತಿ ಸೇವೆ, ದುರ್ಗಾ ಹೋಮ ಶಿವಪಂಚಾಕ್ಷರಿ ಮಹಾಮಂತ್ರ ಹೋಮ, ನಾಗ ದೇವರಿಗೆ ಪವಮಾನ ಕಲಶ, ಮಹಾಶಿವರಾತ್ರಿ ದಿನ ಬೆಳಗ್ಗೆಯಿಂದ ಪಂಚಾಮೃತ ಅಭಿಷೇಕ ಪುರಸ್ಪರ ಅಷ್ಟೋತ್ತರ ಸಹಸ್ರ ಬಿಲ್ವಾರ್ಚನೆ, ಮಹಾರಂಗಪೂಜೆ ನಡೆಯಲಿದೆ.

ಸಮಾರೋಪ ಸಮಾರಂಭ: ಫೆ.26 ರಂದು ಸಾಯಂಕಾಲ 5 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಗೃಹಸಚಿವ ಜಿ.ಪರಮೇಶ್ವರ್​ ಭಾಗವಹಿಸಲಿದ್ದಾರೆ ಎಂದು ರಘುಪತಿ ಭಟ್ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ದೇವಳದ ಆಡಳಿತ ಮೊಕ್ತೇಸರ ಮಹೇಶ್​ ಠಾಕೂರ್​, ಶಾಶ್ವತ ಟ್ರಸ್ಟಿ ದಿನೇಶ್​ ಸಾಮಂತ್​, ಟ್ರಸ್ಟಿಗಳಾದ ಸತೀಶ್​ ಪಾಟೀಲ್​, ಶುಭಕರ್​ ಸಾಮಂತ್​, ಪ್ರಕಾಶ್​ ಪ್ರಭು, ಅಶೋಕ್​ ಸಾಮಂತ್​, ಸಾಂಸ್ಕೃತಿಕ ಕಾರ್ಯದರ್ಶಿ ನಾಗರಾಜ್​ ಕಾಮತ್​, ಆರೋಗ್ಯ ಮೇಳದ ಉಸ್ತುವಾರಿ ಡಾ.ರೇಷ್ಮಾ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮಂಜುನಾಥ್​, ಶಿವಪಾಡಿ ವೈಭವ ಆಚರಣಾ ಸಮಿತಿಯ ಪ್ರ.ಕಾರ್ಯದರ್ಶಿ ಪ್ರಕಾಶ್​ ಕುಕ್ಕೆಹಳ್ಳಿ, ದೇವಳದ ಅಭಿವೃದ್ಧಿ ಟ್ರಸ್ಟ್​ನ ಕಾರ್ಯದರ್ಶಿ ಗೋಪಾಲಕೃಷ್ಣ ಪ್ರಭು ಉಪಸ್ಥಿತರಿದ್ದರು.

 

 

 

LEAVE A REPLY

Please enter your comment!
Please enter your name here