Home ಸಿನೆಮಾ ನಟ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್‌ ದಂಪತಿ

ನಟ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್‌ ದಂಪತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ನಟನನ್ನು ಭೇಟಿಯಾಗಲು ಸೆಲಿಬ್ರೆಟಿಗಳು, ಅಭಿಮಾನಿಗಳು ಜೈಲಿನ ಬಳಿ ಬರುತ್ತಿದ್ದಾರೆ. ಆದರೆ ಪೊಲೀಸರು ಸೆಲಿಬ್ರೆಟಿಗಳನ್ನು ಹೊರತುಪಡಿಸಿ ಯಾರಿಗೂ ದರ್ಶನ್‌ ಭೆಟಿಗೆ ಅವಕಾಶ ಮಾಡಿಕೊಡುತ್ತಿಲ್ಲ. ಈ ನಡುವೆ ನಟಿ ರಕ್ಷಿತಾ, ಪ್ರೇಮ್‌ ದಂಪತಿ ದರ್ಶನ್‌ ಅವರನ್ನು ಭೇಟಿಯಾಗಿದ್ದಾರೆ.

ನಟ ದರ್ಶನ್‌ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನಟಿ ರಕ್ಷಿತಾ, ಈ ಘಟನೆ ನಡೆದಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ನಿರ್ದೇಶಕ ಪ್ರೇಮ್‌ ಮಾತನಾಡಿ ಪ್ರಕರಣ ನ್ಯಾಯಲಯದಲ್ಲಿದೆ. ಈ ವೇಳೆ ನಾವು ಕೇಸ್‌ ಕುರಿತು ಮಾತನಾಡುವುದು ಸರಿಯಲ್ಲ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿದ್ದಾರೆ.

ಇನ್ನು, ಜುಲೈ 4 ರವರೆಗೆ ದರ್ಶನ್‌ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ. ಈ ನಡುವೆ ದರ್ಶನ್‌ಗೆ ನೀಡಿರುವ ಖೈದಿ ನಂಬರ್‌ ಅನ್ನು ಕೆಲವರು ತಮ್ಮ ಲಕ್ಕಿ ನಂಬರ್‌ ಎಂದು ಅವರ ವಾಹನಕ್ಕೆ ರಿಜಿಸ್ಟರ್‌ ಮಾಡಿಕೊಳ್ಳಲು ಮುಂದಾಗುತ್ತಿದ್ದಾರೆ. ಅಲ್ಲದೇ ಕೆಲವು ಅಭಿಮಾನಿಗಳು ಜೈಲಿನ ಬಳಿ ಬಂದು ದರ್ಶನ್‌ ಅವರನ್ನು ಭೇಟಿ ಮಾಡಲು ಹಠ ಹಿಡಿಯುತ್ತಿರುವುದು ಪೊಲೀಸರಿಗೆ ಪಜೀತಿಯಾಗಿದೆ.

 
Previous articleಮಧುಮೇಹ ಸಮಸ್ಯೆ ಇರುವವರು ಹಾಲಿನ ಪುಡಿ ಚಹಾ, ಕಾಫಿ ಸೇವನೆಯಿಂದ ದೂರ ಇರುವುದು ಉತ್ತಮ..!
Next articleಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃವಿಯೋಗ