
ಉಡುಪಿ: ಇಂಧನ ಸಚಿವರಾದ ಕೆ. ಜೆ.ಜಾರ್ಜ್ ಅವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ನಂತರ ಗೀತಾಮಂದಿರದಲ್ಲಿ ಪರ್ಯಾಯ ಶ್ರೀಪಾದರನ್ನು ಭೇಟಿ ಮಾಡಿ ಅವರಿಂದ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಶ್ರೀಪಾದರು ಪರ್ಯಾಯ ಯೋಜನೆ ಹಾಗೂ ಭಗವದ್ಗೀತೆಯ ವ್ಯಾಪಕ ಪ್ರಚಾರವನ್ನು ತಿಳಿಸಿ ಸಚಿವರಿಗೆ ಭಗವದ್ಗೀತೆಯ ಪುಸ್ತಕವನ್ನು ನೀಡಿ ಹರಸಿದರು
