Home ಕರ್ನಾಟಕ ಕರಾವಳಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಉಡುಪಿಯ ಎಂಜಿಎಂ ಮೈದಾನದಲ್ಲಿ ವಿದ್ಯಾರ್ಥಿಗೆ ಚೂರಿ ಇರಿತ

ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಉಡುಪಿಯ ಎಂಜಿಎಂ ಮೈದಾನದಲ್ಲಿ ವಿದ್ಯಾರ್ಥಿಗೆ ಚೂರಿ ಇರಿತ

0
ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಉಡುಪಿಯ ಎಂಜಿಎಂ ಮೈದಾನದಲ್ಲಿ ವಿದ್ಯಾರ್ಥಿಗೆ ಚೂರಿ ಇರಿತ

ಉಡುಪಿ: ಉಡುಪಿಯ ಎಂಜಿಎಂ ಮೈದಾನದಲ್ಲಿ ವಿದ್ಯಾರ್ಥಿಯೋರ್ವನಿಗೆ ತಂಡವೊಂದು ಹಲ್ಲೆ ನಡೆಸಿ ಚೂರಿಯಿಂದ ಇರಿದ ಘಟನೆ ಜ. 29ರಂದು ಮಧ್ಯಾಹ್ನ ಸಂಭವಿಸಿದೆ.

ಹಲ್ಲೆಗೊಳಗಾದ ವಿದ್ಯಾರ್ಥಿ ಬ್ರಹ್ಮಾವರದ ಹೇರೂರಿನ ಪ್ರತೀಕ್ (17ವರ್ಷ) ಎಂದು ತಿಳಿದುಬಂದಿದೆ.

ಹಲ್ಲೆಗೊಳಗಾದ ವಿದ್ಯಾರ್ಥಿ ಉಡುಪಿಯ ಕೋಚಿಂಗ್ ಸೆಂಟರ್‌ವೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಅಲ್ಲಿ ಸುಹಾಸ್ ಎಂಬಾತ ಪರಿಚಯವಾಗಿತ್ತು. ಪ್ರತೀಕ್ ಒಂದುವರೆ ತಿಂಗಳ ಹಿಂದೆ ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸಿದ್ದರು. ಇದನ್ನು ನೋಡಿದ ಸುಹಾಸ್ ನು ಹೊಟ್ಟೆ ಕಿಚ್ಚಿನಿಂದ ನೀನು ಈ ಬೈಕ್ ನ್ನು ಕದ್ದಿದ್ದೀಯಾ ಎಂದು ಹಿಯಾಲಿಸಿದ್ದನು ಎನ್ನಲಾಗಿದೆ.

ಜ. 29ರಂದು ಮಧ್ಯಾಹ್ನ ವೇಳೆ ಪ್ರತೀಕ್ ಅವರು, ಎಂಜಿಎಂ ಮೈದಾನಕ್ಕೆ ಹೋದಾಗ ಅಲ್ಲಿದ್ದ ಆರೋಪಿಗಳಾದ ಸುಹಾಸ್, ಮೋನೀಶ್‌, ತರುಣ್ ಹಾಗೂ ಇಬ್ಬರು ಅಪರಿಚಿತ ವ್ಯಕ್ತಿಗಳು ಸೇರಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿದ್ದಲ್ಲದೆ, ಇನ್ನೋರ್ವ ಆರೋಪಿ ತರುಣ್ ಎಂಬಾತ ಚಾಕುವಿನಿಂದ ಪ್ರತೀಕ್ ಅವರ ಹೊಟ್ಟೆ ಹಾಗೂ ತೊಡೆಯ ಭಾಗಕ್ಕೆ ಇರಿದು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರತೀಕ್ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

 

LEAVE A REPLY

Please enter your comment!
Please enter your name here