Home ಕರ್ನಾಟಕ ಆಶಾಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್:‌ ಪ್ರತಿ ತಿಂಗಳು 10ರಂದೇ ನಿಮ್ಮ ಖಾತೆಗೆ ಗೌರವಧನ ಜಮಾ

ಆಶಾಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್:‌ ಪ್ರತಿ ತಿಂಗಳು 10ರಂದೇ ನಿಮ್ಮ ಖಾತೆಗೆ ಗೌರವಧನ ಜಮಾ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ಪರವಾಗಿ ಅನೇಕ ಘೋಷಣೆಗಳನ್ನು ಮಾಡುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಶೀಘ್ರವೇ ಹೆಚ್ಚಿಸುವ ಭರವಸೆ ನೀಡಿದ ಬಳಿಕ ಇದೀಗ ಆಶಾಕಾರ್ಯಕರ್ತೆಯರ ಬೇಡಿಕೆಯನ್ನೂ ಕೂಡ ಈಡೇರಿಸುವಲ್ಲಿ ಮುಂದಾಗಿದೆ.
ಹೌದು, ಈ ಹಿಂದೆ ಆಶಾಕಾರ್ಯಕರ್ತೆಯರು ತಮ್ಮ ಗೌರವಧನ ಪಾವತಿ ವಿಳಂಬದ ವಿರುದ್ಧ ಪ್ರತಿಭಟನೆಯನ್ನು ನಡೆಸಿದ್ದರು, ಈ ಹಿನ್ನೆಲೆ ಸರ್ಕಾರ ಈ ಬಗ್ಗೆ ಸೂಕ್ತ ನಿರ್ಧಾರವನ್ನು ತೆಗೆದುಕೊಂಡಿದೆ. ಇಂದು ರಾಷ್ಟ್ರೀಯ ಆರೋಗ್ಯ ಮಿಷನ್‌ ಅಡಿಯಲ್ಲಿ ನಡೆದ ಸಭೆಯಲ್ಲಿ, ಆಶಾಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ಮುಂದಿನ ತಿಂಗಳ 10ರೊಳಗೆ ಅವರ ಬ್ಯಾಂಕ್‌ ಖಾತೆಗೆ ಜಮಾ ಮಾಡುವಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚಿಸಿದ್ದಾರೆ.

 
Previous articleರಾಜ್ಯಕ್ಕೆ ಎಂಟ್ರಿ ಕೊಟ್ಟ ವರುಣ: ಹಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್
Next articleಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗೆ ಶೀಘ್ರವೇ ಸಿಗಲಿದೆ ಚಾಲನೆ