Home ಸುದ್ದಿಗಳು ರಾಜ್ಯ ಇಂದಿನಿಂದ ಆರಂಭವಾಗಲಿದೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ

ಇಂದಿನಿಂದ ಆರಂಭವಾಗಲಿದೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ

0
ಇಂದಿನಿಂದ ಆರಂಭವಾಗಲಿದೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ನೀಡಿರುವ ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಇಂದಿನಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗಿದೆ. ಸೇವಾ ಸಿಂಧು ಪೋಟಲ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಆಧಾರ್‌ ಕಾಡ್‌ ನಂಬರ್‌ ಮತ್ತು ವಿದ್ಯುತ್‌ ಬಿಲ್‌ ನಲ್ಲಿರುವ ಆರ್‌ಆರ್‌ ನಂಬರ್‌ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಇನ್ನು, ಅರ್ಜಿಗಳನ್ನು ಕೇವಲ ಆನ್‌ಲೈನ್‌ ಮೂಲಕ ಮಾತ್ರ ಅಲ್ಲದೇ ಇಂಧನ ಇಲಾಖೆಯಿಂದ ಬಿಡುಗಡೆ ಮಾಡಿರುವ ಕ್ಯೂರ್‌ ಸ್ಕ್ಯಾನ್‌ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯ ಕುರಿತು ಏನಾದರೂ ಅನುಮಾನಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ 1912 ಕ್ಕೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ.

 

LEAVE A REPLY

Please enter your comment!
Please enter your name here