
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ 5ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ನಿನ್ನೆಯಿಂದ ಅವಕಾಶ ಮಾಡಿಕೊಡಲಾಗಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮೊದಲ ದಿನವೇ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು, ಒಂದೇ ದಿನಕ್ಕೆ 55ಸಾವಿರ ಗ್ರಾಹಕರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ.
ಹೌದು, ಗೃಹಜ್ಯೋತಿ ಯೋಜನೆಯಡಿಯಲ್ಲಿ 200ಯೂನಿಟ್ ಫ್ರೀ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಕೆಗೆ ನಿನ್ನೆ ಅವಕಾಶ ಮಾಡಿಕೊಡಲಾಗಿದ್ದು, ಭಾನುವಾರವಾದರೂ ಕೂಡ ಜನರು ಗ್ರಾಮ್ ಒನ್ ಗೆ ತೆರಳಿ ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ಕೇವಲ ಒಂದೇ ದಿನದಲ್ಲಿ 55ಸಾಅವಿರ ಜನರು ನೋಂದಾಯಿಸಿಕೊಂಡಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ. ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಆಧಾರ್ ಕಾಡ್ ನಂಬರ್ ಮತ್ತು ವಿದ್ಯುತ್ ಬಿಲ್ ನಲ್ಲಿರುವ ಆರ್ಆರ್ ನಂಬರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಇನ್ನು, ಅರ್ಜಿಗಳನ್ನು ಕೇವಲ ಆನ್ಲೈನ್ ಮೂಲಕ ಮಾತ್ರ ಅಲ್ಲದೇ ಇಂಧನ ಇಲಾಖೆಯಿಂದ ಬಿಡುಗಡೆ ಮಾಡಿರುವ ಕ್ಯೂರ್ ಸ್ಕ್ಯಾನ್ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯ ಕುರಿತು ಏನಾದರೂ ಅನುಮಾನಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ 1912 ಕ್ಕೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ.
