
ನವದೆಹಲಿ: ನಟ ಪ್ರಭಾಸ್ಅವರ ಬಹುನಿರೀಕ್ಷಿತ ಆದಿಪುರುಷ್ಸಿನಿಮಾದ ಪ್ರೀ ರಿಲೀಸ್ಇವೆಂಟ್ಇತ್ತೀಚೆಗಷ್ಟೇ ಅದ್ದೂರಿಯಾಗಿ ನೆರವೇರಿತ್ತು. ಇದಕ್ಕಾಗಿ ಇತಿಹಾಸದಲ್ಲೇ ಅತಿದೊಡ್ಡ ಸೆಟ್ಅನ್ನು ನಿರ್ಮಾಣ ಮಾಡಿ ಕೋಟಿಗಟ್ಟಲೆ ಖರ್ಚುಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಸಲಾಗಿತ್ತು. ಇದೀಗ ಈ ಸಿನಿಮಾದ ಕುರಿತು ತೆಲಂಗಾಣದ ಖ್ಯಾತ ಜ್ಯೋತಿಷಿ ವೇಣುಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಈ ಬಗ್ಗೆ ಭವಿಷ್ಯ ನುಡಿದಿರುವ ಅವರು, ಈ ಸಿನಿಮಾದ ಕುರಿತು ಜನ ಆಸಕ್ತಿ ತೋರಿಸುವುದಿಲ್ಲ. ಪ್ರಭಾಸ್ ಅವರ ಗ್ರಹಗತಿಗಳು ಸಹ ಸರಿಯಿಲ್ಲ. ಈ ಕಾರಣಕ್ಕೆ ಅವರ ಸಿನಿಮಾಗಳು ಸತತವಾಗಿ ಸೋಲುತ್ತಿವೆ. ಸಿನಿಮಾದ ಯಶಸ್ಸು ಸಹ ನಕ್ಷತ್ರಗಳು, ಗ್ರಹಗತಿಯನ್ನು ಆಧರಿಸಿರುತ್ತವೆ. ಈಗಿನ ಪರಿಸ್ಥಿತಿಯಲ್ಲಿ ಪ್ರಭಾಸ್ ಗ್ರಹಗತಿ ಸರಿಯಿಲ್ಲ ಎಂದಿದ್ದಾರೆ.
ಇನ್ನು, ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿರುವ ಈ ಸಿನಿಮಾ ಸದ್ಯದಲ್ಲೇ ತೆರೆಮೇಲೆ ಬರಲು ಸಜ್ಜಾಗಿದೆ. ಈ ಹಿನ್ನೆಲೆ ಬಾಲಿವುಡ್ನಟ ರಣಬೀರ್ಕಪೂರ್ಅವರು ಸಿನಿಮಾ ನೋಡಲು 10,000 ಟಿಕೆಟ್ಗಳನ್ನು ಈಗಾಗಲೇ ಬುಕ್ಕಿಂಗ್ಮಾಡಿದ್ದಾರೆ. ಹಿಂದುಳಿದ ಮಕ್ಕಳಿಗೆ ಈ ಸಿನಿಮಾವನ್ನು ತೋರಿಸುವ ಸಲುವಾಗಿ ಟಿಕೆಟ್ಕಾಯ್ದಿರಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ, ತೆಲಂಗಾಣದಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳು, ವೃದ್ಧಾಶ್ರಮಗಳು ಮತ್ತು ಅನಾಥಾಶ್ರಮಗಳಿಗೆ 10,000 ಉಚಿತ ಟಿಕೆಟ್ಗಳನ್ನು ನೀಡಲು ನಿಮಾಪಕ ಅಭಿಷೇಕ್ಅಗರ್ವಾಲ್ಮುಂದಾಗಿದ್ದಾರೆ. ಅಲ್ಲದೇ, ಕೆಆರ್ಜಿ ಸ್ಟುಡಿಯೋಸ್ಸಂಸ್ಥೆ ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ.
ಈ ಮೂವಿಯಲ್ಲಿ ಶ್ರೀರಾಮನಾಗಿ ಪ್ರಭಾಸ್ ಕಾಣಿಸಿಕೊಂಡರೆ ಕೃತಿ ಸನೋನ್ಸೀತೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಒಂದು ಪೌರಾಣಿಕ ಮೂವಿಯಾಗಿದ್ದು 500 ಕೋಟಿ ವೆಚ್ಚದಲ್ಲಿ ಚಿತ್ರವನ್ನು ನಿರ್ಮಿಸಲಾಗುತ್ತಿದೆ. ಜೂನ್ 16ರಂದು ತೆರೆಕಾಣಲಿರುವ ಈ ಚಿತ್ರವನ್ನು ಓಂ ರಾವತ್ ಅವರು ನಿರ್ದೇಶಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಈ ಚಿತ್ರವು 3ಡಿಯ ಮೂಲಕ ತೆರೆಗೆ ಅಪ್ಪಳಿಸಿ ಪ್ರೇಕ್ಷಕರನ್ನು ರಂಜಿಸಲಿದೆ.
