
ಬಳ್ಳಾರಿ: ಈ ಬಾರಿ ವಿಧಾನಸಭೆ ಚುನಾವಣೆ ರಾಜ್ಯ ರಾಜಕರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಬಿಜೆಪಿ ಸೋಲನ್ನನುಭವಿಸಿದರೆ, ಕಾಂಗ್ರೆಸ್ ಗೆಲುವಿನ ಪತಾಕೆ ಹಾರಿಸಿತ್ತು. ಈ ಹಿನ್ನೆಲೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿರುವ ಹಿನ್ನೆಲೆ ಸೋಲಿನ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಲಿಖಿತ ಹಾಗೂ ಮೌಖಿವಾಗಿ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.
