
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನಸ್ನೇಹಿ ಕಾನೂನುಗಳನ್ನು ಜಾರಿಗೆ ತರುತ್ತಿದೆ. ರಾಜ್ಯದ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಡೈರೆಕ್ಟ್ ಎಂಟ್ರಿ ಕೊಡುವುದಾಗಿ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 65 ವಷ ಮೇಲ್ಪಟ್ಟ ಹಿರಿಯ ನಾಗರಿಕರನ್ನು ದೇವರ ದಶನಕ್ಕಾಗಿ ಸರತಿ ಸಾಲಿನಲ್ಲಿ ನಿಲ್ಲಿಸದೇ ನೇರವಾಗಿ ದೇವರ ದಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದಿದ್ದಾರೆ. ಅಷ್ಟೇ ಅಲ್ಲದೇ ಆನ್ಲೈನ್ ಬುಕ್ಕಿಂಗ್ ನಲ್ಲೂ ಹಿರಿಯರಿಗೆ ಮೊದಲ ಆದ್ಯತೆಯನ್ನು ನೀಡಿ, ಅವರಿಗೆ ವಿಶೇಷ ವಸತಿಗಳನ್ನು ನೀಡಲು ಸೂಚೆ ನೀಡಿದ್ದಾರೆ. ಇದು ಕೇವಲ ಮುಜರಾಯಿ ಇಲಾಖೆಗೆ ಸಂಬಂಧಿಸಿದ ದೇವಾಲಯಗಳಿಗೆ ಮಾತ್ರ ಸೀಮಿತವಾಗಿದ್ದು, ಯಾವುದೇ ಖಾಸಗಿ ಅಥವಾ ಟ್ರಸ್ಟ್ ಳಿಂದ ನಡೆಯುವ ದೇವಸ್ಥಾನಗಳಿಎ ಅನ್ವಯಿಸುವುದಿಲ್ಲ ಎಂದಿದ್ದಾರೆ.
