ಬೆಂಗಳೂರು: ಕಳೆದ 11ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ನಡೆದಿದ್ದ ಅತ್ಯಾಚಾರ ಪ್ರಕರಣವೊಂದು ರಾಜ್ಯದಲ್ಲೇ ಸಂಚಲವನ್ನು ಮೂಡಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪುನ್ನು ನೀಡಿದೆ.
ಹೌದು, 2012 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಉಜಿರೆಯಲ್ಲಿ ಸೌಜನ್ಯ ಎಂಬ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ಅವರನ್ನು ದೋಷಮುಕ್ತ ಎಂದು ಆದೇಶಿಸಿದೆ. ಸಿಬಿಐ ಕೋಟ್ನ ವಿಶೇಷ ನ್ಯಾಯಾಧೀಶ ಸಿ.ಬಿ.ಸಂತೋಷ್ ಅವರು ತೀರ್ಪುನ್ನು ನೀಡಿದ್ದಾರೆ.
