Home ಸುದ್ದಿಗಳು ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ: ಶಾಸಕ ಕೆ.ಎಸ್ ಬಸವಂತಪ್ಪ

ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ: ಶಾಸಕ ಕೆ.ಎಸ್ ಬಸವಂತಪ್ಪ

0
ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ: ಶಾಸಕ ಕೆ.ಎಸ್ ಬಸವಂತಪ್ಪ

ದಾವಣಗೆರೆ: ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ ಆಗಲಿದೆ ಎಂದು ಶಾಸಕ ಕೆ.ಎಸ್ ಬಸವಂತಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ತೊಂದರೆಯಿಂದ ಗ್ಯಾರಂಟಿ  ಹಣ ಬಿಡುಗಡೆ ಸಮಸ್ಯೆಯಾಗಿದೆ. ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆವವರು. ಗ್ಯಾರಂಟಿಗೆ ಮಾತ್ರ ಯಾವುದೇ ಕಾರಣಕ್ಕೂ ಹಣ ಕೊರತೆ ಮಾಡಲ್ಲ ಎಂದು ಎಂದಿದ್ದಾರೆ.

ಯುಗಾದಿ ಬಂತು, ಅಕ್ಕಂದಿರು ಯುಗಾದಿ ಜೋರು ಮಾಡ್ತಾರೆ. ಹಬ್ಬ ಎನ್ನುವಷ್ಟರಲ್ಲಿ ಎಲ್ಲಾ ಹಣ ಬಿಡುಗಡೆ ಆಗುತ್ತದೆ ಎಂದರು.

ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರವಾಗಿ, ನೂತನ ಕಾಯ್ದೆಗೆ ರಾಜ್ಯಪಾಲರ ಮುದ್ರೆ ಬಿದ್ದ ತಕ್ಷಣ ಜಾರಿ ಆಗಲಿದೆ. ಇನ್ನು ಮುಂದೆ ಆದರೂ ಸಾಲ ಕೊಡಲು ಬಂದವರನ್ನು ಊರಿಂದ ಹೊರಗಿಡಿ. ಎಲ್ಲಾ ಸಮಯದಲ್ಲಿ ದುಡಿಮೆ ಒಂದೇ ರೀತಿ ಇರೋದಿಲ್ಲ. ಆಗ ಫೈನಾನ್ಸ್‍ನವರು ಟಾರ್ಚರ್ ಮಾಡ್ತಾರೆ. ಆಗ ಅನಾಹುತಗಳು ಆಗುತ್ತವೆ. ನನ್ನ ಕ್ಷೇತ್ರದಲ್ಲಿ ಯಾರಿಗಾದ್ರೂ ಸಮಸ್ಯೆ ಆದರೆ ಹೇಳಿ ಎಂದಿದ್ದಾರೆ.

 

LEAVE A REPLY

Please enter your comment!
Please enter your name here