
ಬೆಂಗಳೂರು: ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ದರ್ಶನ್ಗೆ ರಾಜಾತಿಥ್ಯ ನೀಡಿದ್ದ, ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಜೈಲಿನ ಮೇಲೆ ಮತ್ತೊಮ್ಮೆ ದಾಳಿ ನಡೆಸಿದ್ದಾರೆ.
ಈ ದಾಳಿ ವೇಳೆ ವಿಲ್ಸನ್ ಗಾರ್ಡನ್ ನಾಗನ ಬಳಿ ಇದ್ದ ಮೊಬೈಲ್ ಸೇರಿದಂತೆ 1.3 ಲಕ್ಷ ಮೌಲ್ಯದ ಸ್ಯಾಮ್ಸಂಗ್ ಫೋನ್ಗಳು, ಏಳು ಎಲೆಕ್ಟ್ರಿಕ್ ಸ್ಟವ್ಗಳು, ಐದು ಚಾಕುಗಳು, ಮೂರು ಮೊಬೈಲ್ ಫೋನ್ ಚಾರ್ಜರ್ಗಳು, ಎರಡು ಪೆನ್ ಡ್ರೈವ್ಗಳು, 36,000 ರೂಪಾಯಿ ನಗದು, ಸಿಗರೇಟ್, ಬೀಡಿ ಮತ್ತು ಬೆಂಕಿಕಡ್ಡಿ ಬಾಕ್ಸ್ಗಳು ಸೇರಿದಂತೆ 15 ಮೊಬೈಲ್ ಫೋನ್ಗಳು ಪತ್ತೆಯಾಗಿವೆ. ಇಷ್ಟಲ್ಲದೇ ಡ್ರಗ್ಸ್ ಮತ್ತು ಹಣ ಕೂಡ ಸಿಕ್ಕಿದೆ.
ಇನ್ನು ಮತ್ತೊಂದು ಕಡೆ ರಾಜಾತಿಥ್ಯ ನೀಡಿದ ಸಂಬಂಧ ಜೈಲಿನ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಜೈಲಿನ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡುತ್ತಿಲ್ಲ.
ವಿಲ್ಸನ್ ಗಾರ್ಡನ್ ನಾಗ ಜೈಲಿನಲ್ಲೇ ಕೂತ ಹೊರಗಡೆಯ ವ್ಯಕ್ತಿಗಳ ಧಮ್ಕಿ ಹಾಕಿ ಹಣ ವಸೂಲಿ ಮಾಡ್ತಿದ್ದ ಆರೋಪ ಕೂಡ ಇತ್ತು.
