
ಬೆಂಗಳೂರು: ಕುಮಾರಸ್ವಾಮಿ ಲೇಔಟ್ ಖಾಸಗಿ ಆಸ್ಪತ್ರೆಯಲ್ಲಿ ಕುಡಿದ ಮತ್ತಲ್ಲಿ ವೈದ್ಯ ಹಾಗೂ ನರ್ಸ್ ಸೇರಿ ಯುವತಿಗೆ ನಾಲ್ಕೈದು ಇಂಜೆಕ್ಷನ್ ಕೊಟ್ಟ ಘಟನೆ ನಡೆದಿದೆ.
ನ.3ರಂದು ಯುವತಿಯೊಬ್ಬಳು ತೀವ್ರ ಜ್ವರದಿಂದ ಆಸ್ಪತ್ರೆಗೆ ಹೋಗಿದ್ದಳು. ಈ ವೇಳೆ ನರ್ಸ್ ಮಹೇಂದ್ರ ಕುಡಿದ ಮತ್ತಿನಲ್ಲಿ ಯುವತಿಗೆ ಇಂಜೆಕ್ಷನ್ ನೀಡಿದ್ದಾನೆ.
ಬಳಿಕ ಡಾ.ಪ್ರದೀಪ್ನನ್ನು ಕರೆದು ಚಿಕಿತ್ಸೆ ಕೊಡುವಂತೆ ಹೇಳಿದ್ದಾನೆ. ಡಾ.ಪ್ರದೀಪ್ ಇಂಜೆಕ್ಷನ್ ಹಿಡಿದು ಯುವತಿಯ ಮೈಕೈಗೆ 4-5 ಬಾರಿ ಇಂಜೆಕ್ಷನ್ ಚುಚ್ಚಿದ್ದಾನೆ.
ತಕ್ಷಣ ಯುವತಿಯ ಪೋಷಕರು ಕುಡಿದು ಬಂದಿದ್ದೀರಾ ಎಂದು ವೈದ್ಯ ಹಾಗೂ ನರ್ಸ್ ಮಹೇಂದ್ರನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ವೈದ್ಯ ಸ್ಥಳದಿಂದ ಪರಾರಿಯಾಗಿದ್ದಾನೆ.
ಅಲ್ಲದೇ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ.
