
ಮಂಗಳೂರು: ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ಮೂವರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಆರೋಪಿಗಳನ್ನು ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿ ಎಂದು ಗುರುತಿಸಲಾಗಿದೆ.
2021ರಲ್ಲಿ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿ ಬಳಿ ಎಂಟು ವರ್ಷದ ಬಾಲಕಿಯನ್ನು ಮೂವರು ಆರೋಪಿಗಳು ಅತ್ಯಾಚಾರವೆಸಗಿ ಹತ್ಯೆಗೈದಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೋ ಪ್ರಕರಣದಡಿ ಮೂವರನ್ನು ಬಂಧಿಸಲಾಗಿತ್ತು.
ಪ್ರಕರಣದ ಬಗ್ಗೆ ಗುರುವಾರ ವಿಚಾರಣೆ ನಡೆಸಿದ ಘನ ನ್ಯಾಯಾಲಯದ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ಮೃತ ಬಾಲಕಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿ ಆದೇಶ ಹೊರಡಿಸಿದೆ.
