Home ಸುದ್ದಿಗಳು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

0
ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯಾರೋ ಒಂದಿಬ್ಬರು “ಶಕ್ತಿ’ ಯೋಜನೆಯನ್ನು ನಿಲ್ಲಿಸಿ ಎಂದಾಕ್ಷಣ ನಿಲ್ಲಿಸಲು ಸಾಧ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಉಡುಪಿಯಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲ ಆಗಿದೆ. ಅನುಕೂಲ ಇದ್ದವರು ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವುದನ್ನು ಬಿಡಬಹುದು ಶಕ್ತಿ ಯೋಜನೆ ಜಾರಿಯಾದ ಅನಂತರ ಸಾರಿಗೆ ಸಂಸ್ಥೆಯ ನಿಗಮಗಳು ಹೆಸರು ಪಡೆದಿವೆ ಮತ್ತು ಲಾಭದಲ್ಲಿವೆ ಎಂದರು.

ಕೇಂದ್ರ ಸರಕಾರದ ಬೆಲೆ ಏರಿಕೆಯಿಂದ ಜನರು ರೋಸಿ ಹೋಗಿದ್ದರು. ಕಾಂಗ್ರೆಸ್‌ ಚುನಾವಣೆಗೂ ಪೂರ್ವದಲ್ಲಿ ಘೋಷಿಸಿದಂತೆ ಪಂಚ ಗ್ಯಾರಂಟಿ ಜಾರಿಗೆ ತಂದಿದೆ.

ಮಹಿಳೆಯರ ಪಾಲಿಗೆ ಶಕ್ತಿ ಯೋಜನೆ ಸಂಜೀವಿನಿಯಾಗಿದೆ. ಯಾರೋ ಒಂದಿಬ್ಬರು ಯೋಜನೆ ನಿಲ್ಲಿಸಿ ಎಂದು ಸರಕಾರಕ್ಕೆ ಹೇಳಿದ ಕೂಡಲೇ ನಿಲ್ಲಿಸಲು ಸಾಧ್ಯವಿಲ್ಲ ಎಂದರು.

 

LEAVE A REPLY

Please enter your comment!
Please enter your name here