
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ 6 ಮೇಳಗಳ ತಿರುಗಾಟ ಸೇವೆ ಆರಂಭಗೊಂಡಿದೆ.
ದೇಗುಲದ ಪ್ರಧಾನ ಅರ್ಚಕರಾದ ವಾಸುದೇವ ಆಸ್ರಣ್ಣ ಅವರು ಕಲಾವಿದರಿಗೆ ಗೆಜ್ಜೆ ಹಸ್ತಾಂತರಿಸುವ ಮೂಲಕವಾಗಿ ತಿರುಗಾಟಕ್ಕೆ ಚಾಲನೆ ನೀಡಿದರು.
ಗೆಜ್ಜೆ ಮುಹೂರ್ತಕ್ಕೆ ಪೂರ್ವಭಾವಿಯಾಗಿ ದೇವಸ್ಥಾನದ ಒಳಗಿನ ಗೋಪುರದಲ್ಲಿ ಎಲ್ಲ ಆರು ಮೇಳಗಳ ಪ್ರಧಾನ ಭಾಗವತರ ಹಿಮ್ಮೇಳದೊಂದಿಗೆ ತಾಳಮದ್ದಳೆ ನಡೆಯಿತು.
ಬಳಿಕ ರಥಬೀದಿಯಲ್ಲಿ ಆರು ಮೇಳಗಳ ದೇವರಿಗ ಚೌಕಿ ಪೂಜೆ ನಡೆದ ಬಳಿಕ ಬಯಲಾಟ ಪ್ರದರ್ಶನಗೊಂಡಿತು.
ಮೊಕ್ತೇಸರ ಹಾಗೂ ಆಡಳಿತ ಮಂಡಳಿ ಅಧ್ಯಕ್ಷರು,ಅರ್ಚಕರು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
