Home ಸುದ್ದಿಗಳು ಎಸ್.ಎಂ.ಕೃಷ್ಣ ನಿಧನ: ವಿಶ್ವವಿದ್ಯಾಲಯದ ಪದವಿ ಪರೀಕ್ಷೆ ಮುಂದೂಡಿಕೆ

ಎಸ್.ಎಂ.ಕೃಷ್ಣ ನಿಧನ: ವಿಶ್ವವಿದ್ಯಾಲಯದ ಪದವಿ ಪರೀಕ್ಷೆ ಮುಂದೂಡಿಕೆ

0
ಎಸ್.ಎಂ.ಕೃಷ್ಣ ನಿಧನ: ವಿಶ್ವವಿದ್ಯಾಲಯದ ಪದವಿ ಪರೀಕ್ಷೆ ಮುಂದೂಡಿಕೆ

ಮಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರು ಇಂದು ಮುಂಜಾನೆ ಅಸೌಖ್ಯದಿಂದ ನಿಧನರಾದರು.

ಎಸ್.ಎಂ.ಕೃಷ್ಣ ನಿಧನದ ಕಾರಣದಿಂದ ಬುಧವಾರ (ಡಿ.11) ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಎಲ್ಲಾ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ಬುಧವಾರ ರಜೆ ಇರಲಿದೆ.

ಮಂಗಳವಾರ (ಡಿ.10) ನಸುಕಿನ ಅಸುನೀಗಿದರು. ಕೆಲ ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಎಸ್‌.ಎಂ.ಕೃಷ್ಣ ಅವರು

ಸರ್ಕಾರಿ ರಜೆಯ ಕಾರಣದಿಂದ ಬುಧವಾರ ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಪರೀಕ್ಷೆಯ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ವರದಿಯಾಗಿದೆ.

ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here