Home ಸುದ್ದಿಗಳು 2025-26ನೇ ಹಣಕಾಸು ಬಜೆಟ್ ನಲ್ಲಿ ರೈಲ್ವೆಯ ಬೆಳವಣಿಗೆಗೆ ಆದ್ಯತೆ: ಸಚಿವ ಅಶ್ವಿನಿ ವೈಷ್ಣವ್

2025-26ನೇ ಹಣಕಾಸು ಬಜೆಟ್ ನಲ್ಲಿ ರೈಲ್ವೆಯ ಬೆಳವಣಿಗೆಗೆ ಆದ್ಯತೆ: ಸಚಿವ ಅಶ್ವಿನಿ ವೈಷ್ಣವ್

0
2025-26ನೇ ಹಣಕಾಸು ಬಜೆಟ್ ನಲ್ಲಿ ರೈಲ್ವೆಯ ಬೆಳವಣಿಗೆಗೆ ಆದ್ಯತೆ: ಸಚಿವ ಅಶ್ವಿನಿ ವೈಷ್ಣವ್

ಹುಬ್ಬಳ್ಳಿ: 2025-26ನೇ ಹಣಕಾಸು ಬಜೆಟ್ ನಲ್ಲಿ ವರ್ಷದಲ್ಲಿ ರೈಲ್ವೆಯ ಬೆಳವಣಿಗೆ ಮತ್ತು ದಕ್ಷತೆ ವೇಗಗೊಳಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ ಹೇಳಿದರು.

ವಿಡಿಯೋ ಕಾನ್ಫೆರೆನ್ಸ್​ ಮೂಲಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಬಜೆಟ್​ನಲ್ಲಿ ರೈಲ್ವೆಗಾಗಿ ಕರ್ನಾಟಕಕ್ಕೆ ₹7,564 ಕೋಟಿ ಮೀಸಲಿರಿಸಲಾಗಿದೆ. ಈ ಹಿಂದಿನ ಯುಪಿಎ ಸರ್ಕಾರದ ಅಧಿಕಾರದ ಅವಧಿ ಹೋಲಿಸಿದರೆ 9 ಪಟ್ಟು ಹೆಚ್ಚು ಹಣ ನೀಡಲಾಗಿದೆ. ಕಡಿಮೆ ಅಂತರ ಹೊಂದಿರುವ ರೈಲು ನಿಲ್ದಾಣಗಳಲ್ಲಿ ನಮೋ ಭಾರತ ರೈಲು ಓಡಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದರು.

ಸಾಮರ್ಥ್ಯ ದುರ್ಬಲಗೊಂಡಿರುವ ರೈಲು ಹಳಿಗಳನ್ನು ಹಂತ-ಹಂತವಾಗಿ ಬದಲಾಯಿಸಲಾಗುತ್ತಿದ್ದು, 4-5 ವರ್ಷಗಳಲ್ಲಿ ಎಲ್ಲೆಡೆ ಹೊಸ ಹಳಿ ಅಳವಡಿಕೆಗೆ ಕ್ರಮಕೈಗೊಳ್ಳಲಾಗುವುದು ಎಂದರು.

ಕಡಿಮೆ ಅಂತರ ಹೊಂದಿರುವ ರೈಲು ನಿಲ್ದಾಣಗಳ ಮಧ್ಯೆ ನಮೋ ಭಾರತ ರೈಲು ಓಡಿಸಲು ಕ್ರಮಕೈಗೊಳ್ಳಲಾಗುತ್ತಿದೆ. 100, 150, 200 ಕಿಮೀ ಅಂತರಗಳ ರೈಲು ನಿಲ್ದಾಣಗಳ ಮಧ್ಯೆ ಈ ರೈಲು ಸಂಚರಿಸಲಿದೆ. ಬೆಂಗಳೂರು ಮತ್ತು ಮೈಸೂರು ಮಧ್ಯೆ ನಮೋ ಭಾರತ ರೈಲು ಓಡಿಸುವ ಉದ್ದೇಶ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.

ಈಗಾಗಲೇ ಕರ್ನಾಟಕದಲ್ಲಿ 10 ವಂದೇ ಭಾರತ್​ ರೈಲುಗಳು ಸಂಚರಿಸುತ್ತಿವೆ. ಮುಂದಿನ ದಿನಗಳಲ್ಲಿ ದೇಶದಾದ್ಯಂತ 100 ಹೊಸ ಅಮೃತ ಭಾರತ ಹಾಗೂ 200 ಹೊಸ ವಂದೇ ಭಾರತ್​ ರೈಲುಗಳು ಸಂಚರಿಸಲಿವೆ ಎಂದು ಹೇಳಿದರು.

 

LEAVE A REPLY

Please enter your comment!
Please enter your name here