Home ಸುದ್ದಿಗಳು ಬೆಂಗಳೂರು: ಹಿಟ್​ & ರನ್​ಗೆ ಮೂವರು ವಿದ್ಯಾರ್ಥಿಗಳು ಬಲಿ

ಬೆಂಗಳೂರು: ಹಿಟ್​ & ರನ್​ಗೆ ಮೂವರು ವಿದ್ಯಾರ್ಥಿಗಳು ಬಲಿ

Karkala: Man commits suicide due to debt problem

ಬೆಂಗಳೂರು: ಹಿಟ್​ & ರನ್​ಗೆ ಮೂವರು ವಿದ್ಯಾರ್ಥಿಗಳು ಬಲಿಯಾದ ಘಟನೆ ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ ರಸ್ತೆಯಲ್ಲಿ ನಡೆದಿದೆ.

ಮೃತರನ್ನು ರೋಹಿತ್​​(22), ಸುಚಿತ್(22), ಹರ್ಷ(22) ಎಂದು ಗುರುತಿಯಲಾಗಿದೆ. ಮೃತ ಮೂವರು GKVKನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ನಿನ್ನೆ ತಡರಾತ್ರಿ 1 ಗಂಟೆ ಸುಮಾರಿಗೆ ಮೂವರು ಯುವಕರು ಬೈಕ್​ನಲ್ಲಿ ಲಾಂಗ್​ ಡ್ರೈವ್​ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ಭೀಕರತೆಗೆ ಹೆದ್ದಾರಿಯಲ್ಲಿ ನಜ್ಜು ಗುಜ್ಜಾದ ಸ್ಥಿತಿಯಲ್ಲಿ ಮೃತ ದೇಹಗಳು ಚಲ್ಲಾಪಿಲ್ಲಿಯಾಗಿವೆ. ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ.

 
Previous articleಬಿಪಿಎಲ್ ಕಾರ್ಡುಗಳ ನೈಜತೆ ಕುರಿತು ಸರ್ವೆ ನಡೆಸಲಾಗುತ್ತಿದೆ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
Next articleನಾಗಮಂಗಲದಲ್ಲಿ ಕೋಮುಗಲಭೆ: ಶನಿವಾರದವರೆಗೆ 144 ಸೆಕ್ಷನ್‌ ಜಾರಿ